Thursday 31 October 2013

ಸೌಜನ್ಯಾ ಪ್ರಕರಣ ಸಿಬಿಐಗೆ ಒಪ್ಪಿಸದಿದ್ದರೆ ಕರ್ನಾಟಕ ಬಂದ್ - ಬಜರಂಗದಳ



ಪುತ್ತೂರು (ಕುಂಬ್ರ) : ಉಜಿರೆಯ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾರನ್ನು ಅತ್ಯಾಚಾರಗೆ„ದು ಬರ್ಬರವಾಗಿ ಕೊಲೆ ಮಾಡಿದ ನೈಜ ಆರೋಪಿಗಳನ್ನು ಬಂಧಿಸಬೇಕಾದಲ್ಲಿ ಸರಕಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಸಿಬಿಐಗೆ ಒಪ್ಪಿಸದೇ ಇದ್ದಲ್ಲಿ ವಿಹಿಂಪ ಹಾಗೂ ಬಜರಂಗದಳ ಸಂಘಟನೆ ವತಿಯಿಂದ ಕರ್ನಾಟಕ ರಾಜ್ಯ ಬಂದ್ ಪ್ರತಿಭಟನೆ ಮಾಡಲು ನಾವು ಸಿದ್ದ ಎಂದು ನಮೋ ಭಾರತ್ ಸಂಘಟನೆಯ ಮುಖಂಡ ಅರುಣ್ಕುಮಾರ್ ಪುತ್ತಿಲ ಹೇಳಿದರು.

ಅವರು ಪುತ್ತೂರು ಸಹಾಯಕ ಕಮೀಷನರ್ ಕಚೇರಿ ಎದುರು ಸೌಜನ್ಯಾ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಆಗ್ರಹಿಸಿ ವಿಹಿಂಪ ಹಾಗೂ ಬಜರಂಗದಳ ಸಂಘಟನೆ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮತನಾಡಿದರು.

ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ಹರಾಟಗಳು ನಡೆಯುತ್ತಿದೆ. ಜಾತಿ ಮತ ಬೇಧವಿಲ್ಲದೆ ಎಲ್ಲರೂ ಇದರಲ್ಲಿ ಭಾಗಿಯಾಗಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿ ರೋಪಿಗಳನ್ನು ಬಂಧಿಸಬೇಕಾದ ಸರಕಾರ ಪೊಲೀಸ್ ಇಲಾಖೆ ಓರ್ವ ಮಾನಸಿಕ ಅಸ್ವಸ್ಥನನ್ನು ಬಂಧಿಸಿ ಕೈತೊಳೆದುಕೊಂಡಿದೆ.

ಇದು ಖಂಡನೀಯವಾಗಿದೆ.

ರಾಜ್ಯದಲ್ಲಿ ಈ ರೀತಿಯ ಘಟನೆಗಳು ಮರುಕಳಿಸಬಾರದು. ನಾವು ಯಾವುದೇ ಧಾರ್ಮಿಕ ಕ್ಷೇತ್ರದ ವಿರುದ್ದ ಪ್ರತಿಭಟನೆ ಮಾಡುತ್ತಿಲ್ಲ. ಸೌಜನ್ಯಾ ಕೊಲೆ ಪ್ರರಕರಣದ ಕುರಿತು ತನಿಖೆ ನಡೆಸಿ ನಿಜವಾದ ಆರೋಪಿಗಳನ್ನು ಬಂಧಿಸಿ ಎಂದು ಒತ್ತಾಯ ಮಾಡುತ್ತಿದ್ದೇವೆ. ಸರಕಾರ ಈಗಾಗಲೇ ಸಿಒಡಿ ತನಿಖೆಗೆ ಆದೇಶ ಮಾಡಿ ತನಿಖೆ ನಡೆಯುತ್ತಿದೆ. ಈ ತನಿಖೆಯ ಮೇಲೆ ಜನತೆಗೆ ವಿಶ್ವಾಸವಿಲ್ಲ.

ಸಿಬಿಐಗೆ ಒಪ್ಪಿಸಿದ್ದಲ್ಲಿ ಮತ್ರ ಸತ್ಯ ಬಹಿರಂಗವಾಗುತ್ತದೆ. ಮಹಿಳೆಯರ ದೆ„ರ್ಯದಿಂದ ಬದುಕುವ ವಾತಾವರಣ ಇಲ್ಲಿ ನಿರ್ಮಾಣವಾಗಬೇಕು,

ಮಹಿಳೆಯರ ಮೇಲೆ ಅತ್ಯಾಚಾರ ನಡೆದರೆ ಅದರ ವಿರುದ್ದ ಎಲ್ಲರೂ ಸಂಘಟಿತವಾಗಿ ಹೋರಾಟ ನಡೆಸಬೇಕು. ಸರಕಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಮೂಲಕ ಸಮಾಜದಲ್ಲಿ ಶಾಂತಿಯನ್ನು ಕಾಪಾಡುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.

ಮಾತƒಮಂಡಳಿ ಅಧ್ಯಕ್ಷೆ ಪ್ರೇಮಲತಾ ಮಾತನಾಡಿ ದೇಶಾದ್ಯಂತ ಮಹಿಳೆಯರ ಮೇಲೆ ದೌರ್ಜನ್ಯಗಳು ಅಧಿಕವಾಗುತ್ತಿದೆ. ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗುವ ಪರಿಣಾಮ ಹಿಂದೂ ಸಂಸ್ಕೃತಿ jaನರಲ್ಲಿ ಕ್ಷೀಣಿಸುತ್ತಿದೆ. ಇದರ ಪ್ರಭಾವವಾಗಿ ಇಂದು ಸಮಾಜದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರಗಳು ಅದಿಕವಾಗುತ್ತಿದೆ. ಸೌಜನ್ಯ ಕೊಲೆ ಪ್ರಕರಣದ ಕುರಿತು ಸರಕಾರ ಸಿಬಿಐಗೆ ಒಪ್ಪಿಸಬೇಕು ಎಂದು ಹೇಳಿದರು.

ಬಜರಂಗದಳ ಮುಖಂಡ ಮುರಳೀ ಕೃಷ್ಣ ಹಸಂತಡ್ಕ ಮಾತನಾಡಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ ಸಮಾಜವನ್ನು ಒಡೆಯುವ ಕೆಲಸ ಕೆಲವರಿಂದ ಆಗುತ್ತಿದೆ. ಸೌಜನ್ಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಇದು ಘೋರ ಕೃತ್ಯವಾಗಿದೆ. ಆರೋಪಗಳಿಗೆ ಉಗ್ರ ಶಿಕ್ಷೆಯಾಗಲೇ ಬೇಕು. ಕಾನೂನಿನಡಿಯಲ್ಲಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಈ ಪ್ರಕರಣದಲ್ಲಿ ನ್ಯಾಯ ಸಿಗುವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.

ಬಿಎಂಎಸ್ Auto ಚಾಲಕ ಮಾಲಕ ಸಂಘದ ಮುಖಂಡ ಚಂದ್ರಶೇಖರ್ ಮಾತನಾಡಿ ನಮ್ಮ ದೇಶದಲ್ಲಿ ಬಡವರಿಗೊಂದು ಕಾನೂನು ಶ್ರೀಮಂತರಿಗೊಂದು ಕಾನೂನು ಇಲ್ಲ.

ತಪ್ಪು ಮಾಡಿದವ ಎಷ್ಟೇ ಪ್ರಭಾವಶಾಲಿಯಾದರೂ ಶಿಕ್ಷೆಗೊಳಪಡಿಸಬೇಕು ಎಂದರು.

ಬಜರಂಗದಳದ ದಿನೇಶ್ಕುಮಾರ್ ಜೈನ್ ಮಾತನಾಡಿ ಸೌಜನ್ಯ ಹತ್ಯಾಪ್ರಕರಣದ ಸೂತಕದ ಚಾಯೆ ಇಡೀ ರಾಜ್ಯದಲ್ಲಿ ಆವರಿಸಿದೆ. ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದರೆ ಮಾತ್ರ ಪ್ರಕರಣದ ಸತ್ಯಾಂಶ ಹೊರಬೀಳಲಿದೆ. ತಿಮರೋಡಿಯಂತ ಓರ್ವ ಹಿಂದೂ ಮುಖಂಡ ಈ ಪ್ರಕರಣದ ಕುರಿತು ದ್ವನಿ ಎತ್ತುವ ಮೂಲಕ ಇಡೀ ರಾಜ್ಯದಲ್ಲಿ ಪ್ರತಿದ್ವನಿಸುವ ಹಾಗೆ ಮಾಡಿದ್ದರೆ. ತಿಮರೋಡಿಯಂತ ಮಂದಿ ನಮ್ಮೊಳಗೆ ಹುಟ್ಟಬೇಕಿದೆ. ಪ್ರತೀ ಗ್ರಾಮದಲ್ಲಿ ಓರ್ವ ತಿಮರೋಡಿ ಇರಬೇಕು ಎಂದು ಹೇಳಿದರು. ಯಾವ ಧರ್ಮದ ಹೆಣ್ಣು ಮಗಳ ಮೇಲೆ ಅತ್ಯಾಚಾರ ದೌರ್ಜನ್ಯ ನಡೆದರೂ ನವೆಲ್ಲರೂ ಒಗ್ಗಟ್ಟಾಗಿ ಅದರ ವಿರುದ್ದ ಪ್ರತಿಭಟನೆ ನಡೆಸಲಿದ್ದೇವೆ ಎಂದು ಹೇಳಿದರು.

ಗರ್ಭಕೋಶಕ್ಕೆ ಮಣ್ಣು ಹಾಕಿದ್ದರು ಪ್ರತಿಭಟನೆಯಲ್ಲಿ ಮƒತ ಸೌಜನ್ಯಾರ ತಾಯಿ ಕುಸುಮಾವತಿ ಹಾಗೂ ತಂದೆ ಚಂದಪ್ಪ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ತಾಯಿ ಕುಸುಮಾವತಿ ಕಾಲೇಜಿಗೆ ಹೋಗಿ ಮಧ್ಯಾಹ್ನ ಮನೆಗೆ ಬರುತ್ತೇನೆ ಎಂದು ಹೇಳಿ ತೆರಳಿದ ನನ್ನ ಮಗಳನ್ನು ಅತ್ಯಾಚಾರ ಮಾಡಿ ಕೊಂದು ಹಾಕಿ ಆಕೆಯ ಗರ್ಭಕೋಶಕ್ಕೆ ಮಣ್ಣು ತುಂಬಿದ್ದರು. ಇಂತಹ ಪಾತಕಿಗಳು ನಮ್ಮ ಸಮಾಜದಲ್ಲಿದ್ದು ಅವರ ಅಟ್ಟಹಾಸಕ್ಕೆ ನನ್ನ ಮಗಳು ಬಲಿಯಾದಳು.

ನಮ್ಮ ಹೋರಾಟಕ್ಕೆ ಬೆಂಬಲ ನೀಡಿ ಎಂದು ಬಿಕ್ಕಿಬಿಕ್ಕಿ ಅತ್ತರು. ಈ ಸಂದರ್ಭದಲ್ಲಿ ಹಲವು ಮಂದಿ ಕಣ್ಣೀರು ಹಾಕಿದ ಘಟನೆಯೂ ನಡೆಯಿತು.
ನ್ಯಾಯವಾದಿ ಮಾಧವ ಪೂಜಾರಿ, ಹಿಂದೂ ಮುಂದಾಳು ಡೀಕಯ್ಯ ಪೆರೊÌàಡಿ, ವಿಹಿಂಪ ಮುಖಂಡ ಕೃಷ್ಣಪ್ರಸಾದ್, ಹಾಗೂ ಮಾತƒವಾಹಿನಿ, ದುರ್ಗಾವಾಹಿನಿ, ಸ್ನೇಹಸಂಗಮ Auto ಚಾಲಕ ಮಾಲಕ ಸಂಘ, ಬಿಎಂಎಸ್ Auto ಚಾಲಕ ಮಾಲಕ ಸಂಘ, ಎಬಿವಿಪಿ ಪ್ರತಿಭಟನೆಯಲ್ಲಿ ಭಾಗಹಿಸಿದ್ದವು. ಪ್ರತಿಭಟನಾ ಸಭೆಗೆ ಮೊದಲು ದರ್ಬೆ ವೃತ್ತದಿಂದ ಎ.ಸಿ. ಕಚೇರಿವರೆಗೆ ಮೌನ ಮೆರವಣಿಗೆ ನಡೆಯಿತು. ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.

ಪುತ್ತೂರು ನಗರ ಪೊಲೀಸರು ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದ್ದರು. ಸೌಜನ್ಯಾರ ತಾಯಿ ಮಾತನಾಡಿದರು.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸಿ,ನಿಮ್ಮ ಅಬಿಪ್ರಾಯ ಕಳುಹಿಸ ಬೇಕಾದ ಮೊಬೈಲ್ ಸಂಖ್ಯೆ


ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸಿ,ನಿಮ್ಮ ಅಬಿಪ್ರಾಯ ಕಳುಹಿಸ ಬೇಕಾದ ಮೊಬೈಲ್ ಸಂಖ್ಯೆ

ಇದು ಒಂದು ಯಸ್ .ಯಮ್ .ಯಸ್ ಅಥವಾ ಕರೆಯ ಮೂಲಕ ಹೋರಾಟ.....
ಹಣ ,ಅಥವಾ ಸಮಯ ವ್ಯರ್ಥ ಮಾಡದೇ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸಿ ನ್ಯಾಯ ಕೊಡಿಸಬಹುದು ,ಕೆಳಗೆ ತಿಳಿಸಿದ ನಂಬರಿಗೆ phone ಅಥವಾ sms ಮಾಡಿ.

1) ಶ್ರೀ ವಸಂತ ಬಂಗೇರ, ಮಾನ್ಯ ಬೆಳ್ತಂಗಡಿ ಶಾಸಕರು :- 9448153233

2 )ಶ್ರೀ ಸಿದ್ದರಾಮಯ್ಯ ,ಮಾನ್ಯ ಮುಖ್ಯ ಮಂತ್ರಿಗಳು . ಕರ್ನಾಟಕ ರಾಜ್ಯ ಸರಕಾರ 09448994424,9448054400, ಆಪ್ತ ಕಾರ್ಯದರ್ಶಿ :-9844230777 ಕಚೇರಿ :-080-22253414 email:-cm@kar.nic.in chiefminister@karnataka.gov.in

3)ಶ್ರೀ ಕ ಜ ಜಾರ್ಜ್ ,ಮಾನ್ಯ ಗೃಹ ಸಚಿವರು ,ಕರ್ನಾಟಕ ರಾಜ್ಯ ಸರಕಾರ :-
98450 67437-

4) ಬಿ.ಜಿ ಜ್ಯೋತಿ ಪ್ರಕಾಶ್ ಮಿರ್ಜಿ, ಸರಕಾರದ ಪ್ರದಾನ ಕಾರ್ಯದರ್ಶಿ ಗಳು ,ಗೃಹ ಇಲಾಖೆ 080- 22258830

5)ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು :- 9480800001 ಕಚೇರಿ 080- 22211803 ,22212164 email:- ksdgp@bgl.vsnl.net.in

Monday 28 October 2013

A letter written by Mr. Vasanth Bangera to CM Siddaramaiyya


We have posted here the scanned copy of a letter written by Mr. Vasanth Bangera to CM Siddaramaiyya to bring CBI probe into 'Sowjanya Case'.

Read it:





Protest by AKKDHAK Samithi




AKHILA KARNATAKA KEMPEGOWDA DALITHA HINDULADA ALPASANKHYATARA SAMITHI(AKKDHAK SAMITHI) Organised protest for justice to commemorate 18th birthday of Sowjanya. Members gave respect by lighting candles in Mysore road, Bangalore On 23rd oct.

ಸಿಬಿಐಗೆ ಕೊಡಲು ರಾಜ್ಯದ ಹಿಂದೇಟು ಯಾಕೆ


ಸೌಜನ್ಯಾ ಮನೆಯವರಿಗೆ ನ್ಯಾಯ ಸಿಗಬೇಕು

ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು

ರಾಜ್ಯದ ಹಿಂದೇಟಿನ ಕಾರಣ ಎಲ್ಲರಿಗೂ ತಿಳಿದಿದೆ

ತಳಮಟ್ಟ ಸೇರಿದ ಕರ್ನಾಟಕದ ರಾಜಕಾರಣ

ದೇಶದ ಭವಿಷ್ಯ ನಿರ್ಧರಿಸುವವರು ಜನರು

ಬೆಳ್ತಂಗಡಿ: 
ಸೌಜನ್ಯಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ರಾಜ್ಯ ಸರಕಾರದ ಹಿಂದೇಟು ಯಾಕೆ ಎಂದು ಸಿಪಿಎಂ ಅಖೀಲ ಭಾರತ ಪ್ರಧಾನ ಕಾರ್ಯದರ್ಶಿ ಪ್ರಕಾಶ್‌ ಕಾರಟ್‌ ಪ್ರಶ್ನಿಸಿದ್ದಾರೆ.

ಅವರು ರವಿವಾರ ರಾತ್ರಿ ಧರ್ಮಸ್ಥಳದ ಪಾಂಗಾಳದ ಸೌಜನ್ಯಾ ಮನೆಗೆ ಭೇಟಿ ನೀಡಿ ಮಾಧ್ಯಮದವರ ಜತೆ ಮಾತನಾಡಿದರು.

ಈ ಪ್ರಕರಣದ ಸರಿಯಾದ ತನಿಖೆ ನಡೆಯಲಿಲ್ಲ ಎಂದು ಎಲ್ಲರೂ ಹೇಳುತ್ತಿದ್ದಾರೆ. ನಿಜವಾದ ಅಪರಾಧಿಗಳನ್ನು ಕಂಡು ಹಿಡಿಯಲಿಲ್ಲ ಎಂದು ಅನುಮಾನಿಸಲಾಗುತ್ತಿದೆ. ನಮ್ಮ ಪಕ್ಷ ಹಾಗೂ ಇತರರು ಸಿಬಿಐ ತನಿಖೆಗೆ ಆಗ್ರಹಿಸುತ್ತಿದ್ದಾರೆ. ಹಾಗಿದ್ದರೂ ರಾಜ್ಯ ಸರಕಾರ ಯಾಕೆ ಹಿಂದೇಟು ಹಾಕುತ್ತಿದೆ ಎಂದು ಅವರು ಪ್ರಶ್ನಿಸಿದರು.

ಸೌಜನ್ಯಾ ಕುಟುಂಬದ ಜತೆ ನಾವಿದ್ದೇವೆ
ರಾಜ್ಯ ಸರಕಾರ ಈ ಕುರಿತು ತತ್‌ಕ್ಷಣ ತೀರ್ಮಾನ ಕೈಗೊಳ್ಳಬೇಕು. ಇದಕ್ಕೇ ಬೇಕಾದ ಎಲ್ಲ ಅಗತ್ಯ ಕ್ರಮಗಳನ್ನೂ ಸಿಪಿಎಂ ಕೈಗೊಳ್ಳಲಿದೆ. ಸೌಜನ್ಯಾ ಮನೆಯವರಿಗೆ ನ್ಯಾಯ ಸಿಗಬೇಕು. ಇದು ಭಯಾನಕ, ಕ್ರೂರ ಹಾಗೂ ಹೇಯ ಕೃತ್ಯ. ನಿಜವಾದ ಅಪರಾಧಿಗಳು ಪತ್ತೆಯಾಗಲೇಬೇಕು. ಇಂತಹ ದೌರ್ಜನ್ಯವನ್ನು ನಾವು ಖಂಡಿಸುತ್ತೇವೆ. ಸೌಜನ್ಯಾ ಮನೆಯವರ ಜತೆಗೆ ನಾವು ಇರುತ್ತೇವೆ ಎಂದರು.

ಪ್ರಯತ್ನ ಮಾಡಲಿದ್ದೇವೆ
ಸರಕಾರ ಸಿಬಿಐಗೆ ವಹಿಸಿಕೊಡಲಿದೆ ಎಂಬ ವಿಶ್ವಾಸವಿಟ್ಟು ನಾವು ಪ್ರಯತ್ನ ಮಾಡಲಿದ್ದೇವೆ. ನಾಗಪುರ ಸೇರಿದಂತೆ ದೇಶದ ವಿವಿಧೆಡೆ ಇಂತಹ ಕೃತ್ಯಗಳು ನಡೆದಿವೆ. ಸ್ಥಳೀಯ ಸರಕಾರಗಳು ಜನರ ಬೇಡಿಕೆಗೆ ಮಣಿದು ಸಿಬಿಐಗೆ ವಹಿಸಿವೆ. ನಾವು ಸದನದಲ್ಲಿ ಈ ವಿಷಯ ಪ್ರಸ್ತಾಪ ಮಾಡಿದರೂ ರಾಜ್ಯ ಸರಕಾರ ಅಥವಾ ಹೈಕೋರ್ಟ್‌ ಮಾತ್ರ ಸಿಬಿಐಗೆ ಕೊಡಲು ಸಮರ್ಥರು. ಕೇಂದ್ರ ಸರಕಾರ ಸಲಹೆ ನೀಡಬಹುದು ಅಷ್ಟೇ. ಆದ್ದರಿಂದ ಸರಕಾರ ಗಂಭೀರವಾಗಿ ಇದನ್ನು ಪರಿಗಣಿಸಬೇಕು ಎಂದರು.

ಇತರ ಪಕ್ಷಗಳು ಒತ್ತಡ ಹೇರುತ್ತಿಲ್ಲ
ಸಿಪಿಎಂ ರಾಜ್ಯ ಕಾರ್ಯದರ್ಶಿ, ಮಾಜಿ ಶಾಸಕ ಜಿ.ವಿ. ಶೀÅರಾಮ ರೆಡ್ಡಿ ಮಾತನಾಡಿ, ರಾಜ್ಯ ಸರಕಾರ ಯಾಕೆ ಹಿಂದೇಟು ಹಾಕುತ್ತಿದೆ ಎನ್ನುವುದು ಎಲ್ಲರಿಗೂ ತಿಳಿದ ವಿಚಾರ. ಅದಕ್ಕೆ ಪ್ರತ್ಯೇಕ ರಾಜಕೀಯ ಕಾರಣಗಳಿವೆ. ಸಿಪಿಎಂ ಹೊರತುಪಡಿಸಿ ಇತರ ಯಾವುದೇ ಪಕ್ಷಗಳು ತಮ್ಮ ರಾಜಕೀಯ ಹಿತಾಸಕ್ತಿಗೆ ಈ ವಿಚಾರದ ಸಿಬಿಐ ತನಿಖೆಗೆ ಒತ್ತಡ ತರುತ್ತಿಲ್ಲ. ಕರ್ನಾಟಕದ ರಾಜಕಾರಣ ಎಷ್ಟು ತಳಮುಟ್ಟಿದೆ ಎನ್ನುವುದು ಇದರಿಂದ ತಿಳಿಯುತ್ತದೆ ಎಂದರು.

ಸಿಪಿಎಂ ಹೋರಾಟದಿಂದ ಇಂದು ಜನರ ಬಾಯಲ್ಲಿ ಸೌಜನ್ಯಾ ಪ್ರಕರಣ ಸಿಬಿಐಗೆ ಒಪ್ಪಿಸಬೇಕೆಂಬ ಮಾತು ಎಲ್ಲೆಡೆ ಕೇಳಿ ಬರುತ್ತಿದೆ. ಜನರ ಅಭಿಪ್ರಾಯಕ್ಕೆ ಮನ್ನಣೆ ಕೊಡದ ಸರಕಾರ ಬಾಳಿಕೆ ಬರುವುದಿಲ್ಲ. ಏಕೆಂದರೆ ಜನರಿಗೆ ರಾಜಕೀಯ ದುರುದ್ದೇಶ ಇರುವುದಿಲ್ಲ. ದೇಶದ ಭವಿಷ್ಯ ತೀರ್ಮಾನ ಮಾಡುವುದು ಜನರೇ ವಿನಃ ಜನಪ್ರತಿನಿಧಿಗಳಲ್ಲ. ಆದ್ದರಿಂದ ತತ್‌ಕ್ಷಣ ರಾಜ್ಯ ಸರಕಾರ ಮುತುವರ್ಜಿ ವಹಿಸಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದರು.

ಸೌಜನ್ಯಾರ ತಂದೆ ಚಂದಪ್ಪ ಗೌಡ ಹಾಗೂ ತಾಯಿ ಕುಸುಮಾವತಿ ಅವರು ಸಿಬಿಐ ಹೊರತುಪಡಿಸಿ ಇತರ ತನಿಖೆಗಳಲ್ಲಿ ನಂಬಿಕೆ ಇಲ್ಲ ಎಂದರು.

ಸಿಪಿಐಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಬಿ.ಎಂ. ಭಟ್‌, ವಸಂತ ಆಚಾರಿ, ತಾಲೂಕು ಕಾರ್ಯದರ್ಶಿ ಶಿವಕುಮಾರ್‌, ಡಿವೈಎಫ್‌ಐ ಜಿಲ್ಲಾಧ್ಯಕ್ಷ ಮುನೀರ್‌ ಕಾಟಿಪಳ್ಳ, ಕರ್ನಾಟಕ ಪ್ರಾಂತ ರೈತ ಸಂಘದ ಹರಿದಾಸ್‌, ಜನವಾದಿ ಮಹಿಳಾ ಸಂಘಟನೆಯ ಸುಕನ್ಯಾ, ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ದಯಾನಂದ ಶೆಟ್ಟಿ, ಶೇಖರ್‌ ಎಲ್‌., ಇಮಿ¤ಯಾಜ್‌ ಮೊದಲಾದವರು ಇದ್ದರು.

(Courtesy: Udayavani)

Saturday 26 October 2013

ಸೌಜನ್ಯ ಪ್ರಕರಣ: ಸಿಬಿಐಗೆ ನೀಡಲು ಆಗ್ರಹ


ಸುಳ್ಯ: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುವುದನ್ನು ಖಂಡಿಸಿ ಹಾಗು ಸೌಜನ್ಯ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಸಾರ್ವಜನಿಕ ಹಿತರಕ್ಷಣಾ ವೇದಿಕೆ ವತಿಯಿಂದ ಶನಿವಾರ ಸುಳ್ಯ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು.
ನಂಬಿಕೆಗಳನ್ನು ಸಂಶಯಿಸುವುದು ಹಾಗೂ ಸಂಶಯಗಳನ್ನು ನಂಬುವುದು ಸರಿಯಲ್ಲ, ಸೌಜನ್ಯ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಅದೇ ರೀತಿ ಶ್ರದ್ಧಾ ಭಕ್ತಿಯ ಕ್ಷೇತ್ರವಾದ ಧರ್ಮಸ್ಥಳದ ವಿರುದ್ಧ ನಡೆಸುವ ಅಪಪ್ರಚಾರವನ್ನು ನಿಲ್ಲಿಸಬೇಕು ಎಂದು ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಎಂ.ಬಿ.ಸದಾಶಿವ ಹೇಳಿ ದರು. 
ಸಮಿತಿ ಸಂಚಾಲಕ ಎನ್.ಎ. ರಾಮಚಂದ್ರ, ಅಧ್ಯಕ್ಷ ಜಯ ರಾಮ ಹಾಡಿಕಲ್ಲು, ಕಾರ್ಯದರ್ಶಿ ಎಂ. ವೆಂಕಪ್ಪ ಗೌಡ, ಕೆ.ಎಂ.ಮುಸ್ತಫ, ಡಾ. ಹರಿಪ್ರಸಾದ್ ಮಾತನಾಡಿದರು. ಬೂಡು ರಾಧಾಕೃಷ್ಣ ರೈ, ಚಂದ್ರಾ ಕೋಲ್ಚಾರ್, ಪಿ.ಸಿ.ಜಯರಾಮ, ಭವಾನಿಶಂಕರ ಅಡ್ತಲೆ ಇದ್ದರು. ಪ್ರತಿಭಟನೆಗೂ ಮುನ್ನ ಪಟ್ಟಣದ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರ ವಣಿಗೆ ನಡೆಯಿತು. ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

Want to help Sowjanya's family financially?




A decent work done by one of our campaigners Mr. Rajesh Shetty.

He did a work on to locate Sowjanya's mother Kusumavathi's account number...

He says, he also confirmed this account number by calling to 08256 - 236180 (Vijaya
Bank, Ujire)..

So here we request, those who are interested to support Sowjanya's family financially, they can
confirm the below furnished bank account details by calling to VIJAYA BANK, UJIRE BRANCH...

Account Number : 121301011003198

Account holder name : Kusumavathi

*VIJAYA BANK
Phone:* 08256-236180

VIJAYA BANK
COLLEGE ROAD,  UJIRE
BELTHANGADY TALUK
D. K. DIST,
KARNATAKA - 574240   *Email:* ujire1213@VIJAYABANK.co.in
*Phone:*08256-236180
*Branch Under RTGS:* Yes   *RTGS - IFSC Code :* VIJB0001213

(Please confirm the a/c number before you do anything)

Bhuvith Shetty

Saturday 19 October 2013

49000+ online supporters to 'Justice For Sowjanya' cause from 45 countries.

If a blog, Facebook Page and Twitter can do all these wonders why couldn't our judicial system and main stream medias. 



In fact, It took almost a year to reach main stream medias of Karnataka, our efforts to claim 'Justice For Sowjanya' has been working quite effectively as we have now received 49,000+ supporters from 45 countries. 

Here are the pics showing the number of supporters from respective countries.





Banner in Guruvayanakere Seeking Justice for Sowjanya Found Damaged.



As demands for justice for the family of Sowjanya, the 18-year-old college girl who was sexually assaulted and murdered just over a year ago, have been steadily snowballing, an incident which is likely to create social rift has taken place in Guruvayanakere near here.

A banner had been put up in the middle of shopping area in the name of devotees of Annappa Swamy and Manjunatha Swamy, the twin reigning deities of Dharmasthala. Miscreants appeared to have burnt the banner late Wednesday night.

When the fire was about to spread to a nearby shop, the fire brigade was informed and they prevented further damage. A police complaint has been filed in the matter.
Although the police say that it was an accidental fire, since the banner was put up quite high, such a possibility was quite unlikely, felt many citizens.

In replacement of the burnt one, a fresh banner has been put up on Thursday morning.

A mangalorean.com report. 

I Still have Doubts if CBI will take over Sowjanya murder Case - Vittala Dasa Swamiji


The Sowjanya murder case which has lately become a major issue in the twin districts has led to many controversies. Esha Vittala Dasa Swamiji of Kemaru Math spelt out his stand in the case here on October 18 at Kuthyar, on his visit to Sri Parasurameshwara Kshetra.
 
"I have no grudge with any individual or religious organization, but my sole aim is to provide justice to Sowjanya's family" said the Swamiji speaking to the media persons. "I had visited Sowjanya’s residence because the locals urged me to support them in the fight for justice". Sowjanya’s Mother had approached him asking for his help and support in their fight for justice as he was a religious leader.

The police department has been inefficient in gathering evidence, the CBI can take lead in investigating the case. Political factors are affecting the case, political personalities are giving statements as to create confusion in the case. Influential people are trying to close the case. Protests were organised to provide justice to Sowjanaya's family and also to spread awareness so that such incidents will not continue. Women are respected and worshiped in India, he added.

People are now alarmed by the protests and the news in the media. Representatives of the people often talk about law order and justice, but in practical it is different. Swamiji also said that he has been opposed for raising his voice for justice in this Case but people are with him and justice will be served. "I am not aware who has killed Sowjanya but the cops have the responsibility to find the culprits where they have failed".

Police with the medical report have till now failed to furnish a proper report which has led to confusion. Due to the negligence of the police personnel, other investigation agencies will suffer, he added. We have lost faith in COD investigation agency, furnishing the COD investigation report within 15 days does not make sense now. There must be a CBI investigation, he added.

We are requesting the Chief Minister to re- investigate the case as to clear the confusion. "If the authorities still fail to take up necessary action we will file a PIL in the High court" he added. When asked about whether he has faith that the case will be transferred to CBI he said "I doubt that the case will be transferred to the CBI"

Courtesty: Mangalorean.com

ಸೌಜನ್ಯಾ ಪ್ರಕರಣ ಸಿಬಿಐಗೆ ಒಪ್ಪಿಸಲು ಆಗ್ರಹ





ಬೆಳ್ತಂಗಡಿ: ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಆಗ್ರಹಿಸಿ ಅ.21ರಂದು ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನೆ, 21ಕ್ಕೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಧ‌ರಣಿ, ನ.1ರಂದು ಬೆಳ್ತಂಗಡಿ ತಾಲೂಕಿನ ಕನ್ನಡ ರಾಜ್ಯೋತ್ಸವ ಸಂದರ್ಭ ಕರಿಬಾವುಟ ಪ್ರದರ್ಶನ, ಮೊದಲ ವಾರದಲ್ಲಿ ಮಂಗಳೂರು-ಬೆಂಗಳೂರು ಕಾಲ್ನಡಿಗೆ ಜಾಥಾ, ಅನಂತರ ಅಮರಾಣಾಂತ ಉಪವಾಸ ಸತ್ಯಾಗ್ರಹ, ಬೆಳ್ತಂಗಡಿ ಬಂದ್‌, ಮೊದಲಾದ ಹ
ೋರಾಟ ನಡೆಸಲು ಸಿಪಿಎಂ ಪಕ್ಷ ನಿರ್ಧರಿಸಿದೆ.

ಶುಕ್ರವಾರ ಇಲ್ಲಿನ ತಾಲೂಕು ಕಚೇರಿ ಮೈದಾನದಲ್ಲಿ ಬಾಗೆಪಲ್ಲಿ ಮಾಜಿ ಶಾಸಕ, ಸಿಪಿಐಎಂ ರಾಜ್ಯ ಸಮಿತಿ ಕಾರ್ಯದರ್ಶಿ ಜಿ. ವಿ. ಶ್ರೀರಾಮ ರೆಡ್ಡಿ ಅವರು ಸೌಜನ್ಯಾ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಉಪವಾಸ ಸತ್ಯಾಗ್ರಹ ಉದ್ಘಾಟಿಸಿದರು.

ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಮಾತನಾಡಿ, ನಮ್ಮ ಹೋರಾಟ ವ್ಯಕ್ತಿ, ಸಂಸ್ಥೆಯ ವಿರುದ್ಧವಲ್ಲ. ಸೌಜನ್ಯಾ ಪ್ರಕರಣ ಸಿಬಿಐಗೆ ಒಪ್ಪಿಸಬೇಕು ಎಂದಷ್ಟೇ ಆಗಿದೆ. ಎಲ್ಲ ರಾಜಕೀಯ ಪಕ್ಷದವರೂ ಈ ಹೋರಾಟಕ್ಕೆ ಕೈ ಜೋಡಿಸಬೇಕು. ಸೌಜನ್ಯಾ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ನಾನು ಪ್ರಕರಣದಲ್ಲಿ ಕೈಯಾಡಿಸಿ ಹಾಳುಗೆಡಹಿಲ್ಲ. ಹಾಗೊಮ್ಮೆ ಸೌಜನ್ಯಾ ಮನೆಯವರೇ ಆರೋಪಿಸಿದರೆ ನಾನು ಹೋರಾಟದಿಂದ ಹಿಂದೆ ಸರಿಯುತ್ತೇನೆ ಎಂದರು.

ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಬಿ. ಎಂ. ಭಟ್‌, ಸೌಜನ್ಯಾ ತಂದೆ ಚಂದಪ್ಪ ಗೌಡ, ತಾಯಿ ಕುಸುಮಾವತಿ, ಡಿವೈಎಫ್‌ಐ ಜಿಲ್ಲಾ ಅಧ್ಯಕ್ಷ ಮುನೀರ್‌ ಕಾಟಿಪಳ್ಳ, ಸಿಪಿಐಎಂ ತಾಲೂಕು ಅಧ್ಯಕ್ಷ ಶಿವಕುಮಾರ್‌, ಸಾಹಿತಿ ಆತ್ರಾಡಿ ಅಮೃತಾ ಶೆಟ್ಟಿ, ಜೆಎಂಎಸ್‌ ಅಧ್ಯಕ್ಷೆ ಕಿರಣಪ್ರಭಾ, ಕಾರ್ಯದರ್ಶಿ ಕುಮಾರಿ, ಡಿವೈಎಫ್‌ಐ ತಾಲೂಕು ಅಧ್ಯಕ್ಷ ಮಧುಸೂದನ, ಕಾರ್ಯದರ್ಶಿ ಪ್ರಶಾಂತ್‌, ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಪುಷ್ಪರಾಜ, ಕಾರ್ಯದರ್ಶಿ ಸುಕನ್ಯಾ, ಶೇಖರ್‌ ಎಲ್‌., ಪತ್ರಕರ್ತ ದೇವಿಪ್ರಸಾದ್‌ ಮೊದಲಾದವರು ಇದ್ದರು.

ಯಾವುದೇ ಬೆದರಿಕೆಗೂ ಹೋರಾಟ ನಿಲ್ಲದು: ಕೇಮಾರು ಶ್ರೀ



ಸೌಜನ್ಯಳಿಗೆ ನ್ಯಾಯ ಕೊಡಿಸಲು ಜಾತಿ, ಧರ್ಮ, ಪಕ್ಷ, ಭೇದ ಮರೆತು ಎಲ್ಲರೂ ಒಂದಾಗಿ ಹೋರಾಡಬೇಕಾಗಿದೆ. ಸೌಜನ್ಯ ಪರ ಮಾತನಾಡಿದರೆ ಖಾವಿ ಬಿಚ್ಚಿಸುವ ಮಾತನ್ನಾಡಿದ್ದಾರೆ. ಆದರೆ ಈ ಯಾವುದೇ ಬೆದರಿಕೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಕೇಮಾರು ಸಾಂದೀಪನಿ ಆಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹೇಳಿದರು. 


ಬೆಳ್ತಂಗಡಿಯಲ್ಲಿ ಡಿವೈಎಫ್‌ಐ, ಜೆಎಂಎಸ್, ಎಸ್‌ಎಫ್‌ಐ ನೇತೃತ್ವದಲ್ಲಿ ಸೌಜನ್ಯಳ ಹುಟ್ಟಿದ ದಿನವಾದ ಶುಕ್ರವಾರ ಆಕೆಯ ಕೊಲೆ, ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿ ದಿನವಿಡೀ ನಡೆದ ಉಪವಾಸ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು. 

ರಾಜಕಾರಣಿಗಳು ಮಾಧ್ಯಮದಲ್ಲಿ ಹೇಳಿಕೆ ಕೊಡುವುದನ್ನು ಬಿಟ್ಟು ಸಂಸತ್ತು, ವಿಧಾನ ಸೌಧದಲ್ಲಿ ಧ್ವನಿ ಎತ್ತಲಿ. ಜನಪ್ರತಿನಿಧಿಗಳೆಲ್ಲರೂ ಒಟ್ಟಾಗಿ ಸೌಜನ್ಯಗಳಿಗಾದ ಅನ್ಯಾಯಕ್ಕೆ ನ್ಯಾಯ ಒದಗಿಸಲು ಹೋರಾಡೋಣ ಎಂದು ಹೇಳಿದ ಕೇಮಾರು ಸ್ವಾಮೀಜಿ, 

ಮಹಿಳೆಯರೆಲ್ಲರೂ ಇದು ತಮ್ಮ ಮಗಳಿಗಾದ ಅನ್ಯಾಯ ಎಂದು ಭಾವಿಸಿ ಧ್ವನಿ ಎತ್ತಬೇಕು, ಇದು ಯಾರದೇ ವಿರುದ್ಧ ಹೋರಾಟವಲ್ಲ, ಸೌಜನ್ಯಳ ಸಾವಿಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು ಎಂಬ ಗುರಿಯೊಂದಿಗೆ ಹೋರಾಟ ಎಂದು ಹೇಳಿದರು. 

ಬೆಳಗ್ಗೆ 11 ಗಂಟೆಯಿಂದ ಸಂಜೆ 4.30ರವರೆಗೆ ನಡೆದ ಉಪವಾಸ ಸತ್ಯಾಗ್ರಹವನ್ನು ಸಿಪಿಎಂ ರಾಜ್ಯ ಕಾರ್ಯದರ್ಶಿ ಜಿ.ವಿ. ಶ್ರೀರಾಮ ರೆಡ್ಡಿ ಉದ್ಘಾಟಿಸಿದರು. 

ಇದು ಯಾವುದೇ ಧರ್ಮ ಇಲ್ಲವೇ ವ್ಯಕ್ತಿ ವಿರುದ್ಧ ಹೋರಾಟವಲ್ಲ, ವ್ಯವಸ್ಥೆಯ ವಿರುದ್ಧ ಹೋರಾಟ. ಧರ್ಮಸ್ಥಳದಲ್ಲಿ ಹಿಂದೆ ಪದ್ಮಲತಾಳ ಅತ್ಯಾಚಾರ ಮತ್ತು ಕೊಲೆಯಾಗಿತ್ತು. ಈಗ ಸೌಜನ್ಯ. ಇದು ಇಲ್ಲಿಗೇ ನಿಲ್ಲಬೇಕು.. ಅದಕ್ಕಾಗಿ ಈ ಹೋರಾಟ. ಪ್ರಕರಣದ ಸಿಬಿಐ ತನಿಖೆ ನಡೆದು ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ ಜಿ.ವಿ. ಶ್ರೀರಾಮ ರೆಡ್ಡಿ, ಪ್ರಕರಣದ ತನಿಖೆಯಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಪೊಲೀಸರು ಹಂತಕರನ್ನು ಬಂಧಿಸುವ ಬದಲು, ದೌರ್ಜನ್ಯದ ವಿರುದ್ಧ ದನಿ ಎತ್ತುವವರನ್ನೇ ದಮನಿಸಲು ಹೊರಟಿದ್ದಾರೆ. ನೊಂದವರ ಪರವಾಗಿ ನಿಲ್ಲಬೇಕಾಗಿದ್ದ ಸರಕಾರ ಶೋಷಕರ ಪರ ನಿಂತಿದೆ ಎಂದರು. 

ಡಿವೆಎಫ್‌ಐ ಜಿಲ್ಲಾ ಅಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, ಜನನಾಯಕರು ಜನರ ಮನಸ್ಸಿನಲ್ಲೇನಿದೆ ಎಂಬುದನ್ನು ಅರಿತು ವರ್ತಿಸಲಿ. ಸಮಾಜವಾದಿ ನಾಯಕ ಸಿದ್ದರಾಮಯ್ಯನವರು ಈಗಲಾದರೂ ಎಚ್ಚೆತ್ತುಕೊಳ್ಳಲಿ. ಬೆಳ್ತಂಗಡಿ ಶಾಸಕ ವಸಂತ ಬಂಗೇರರು ಯಾರ ಪರವೂ ಗುರುತಿಸಿಕೊಳ್ಳದೆ ನಿಂತಿದ್ದಾರೆ. ಅವರು ನ್ಯಾಯದ ಪರ ಇದ್ದಾರೆ ಎಂದು ನಾನು ಭಾವಿಸುತ್ತೇವೆ ಎಂದರು. 

ಜನಪರ ಹೋರಾಟಗಾರ್ತಿ ಅಮೃತಾ ಶೆಟ್ಟಿ ಅತ್ರಾಡಿ ಇಂಥ ಕ್ರೌರ್ಯ ಮೆರೆದವರನ್ನು ಶಿಕ್ಷಿಸಲು ಸಂಘಟಿತ ಹೋರಾಟ ಅಗತ್ಯವಿದೆ ಎಂದರು. 

ಧರಣಿ ಸತ್ಯಾಗ್ರಹವನ್ನು ಉದ್ದೇಶಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ)ದ ಜಿಲ್ಲಾ ಸಂಚಾಲಕ ಚಂದು ಎಲ್., ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಂಚಾಲಕ ರಘು ಜಿ. ಎಕ್ಕಾರ್, ಜಿಲ್ಲಾ ಸಂಘಟನಾ ಸಂಚಾಲಕ ಕೃಷ್ಣಾನಂದ ಡಿ., ಮಂಗಳೂರು ಕಾರ್ಪೊರೇಟರ್ ದಯಾನಂದ ಶೆಟ್ಟಿ, ಡಿವೈಎಫ್‌ಐ ಮಂಗಳೂರು ನಗರ ಅಧ್ಯಕ್ಷ ಇಮ್ತಿಯಾಝ್, ಜೈಕನ್ನಡಮ್ಮ ಸಂಪಾದಕ ದೇವಿಪ್ರಸಾದ್, ಎಸೆಫ್‌ಐ ಮುಖಂಡ ನಿತಿನ್ ಕುಮಾರ್, ಸಿಪಿಎಂ ತಾಲೂಕು ಕಾರ್ಯದರ್ಶಿ ಶಿವಕುಮಾರ್, ಬಿ.ಎಂ. ಭಟ್, ಹರಿದಾಸ್ ಮಾತನಾಡಿದರು. 

ಪ್ರತಿಭಟನೆಯಲ್ಲಿ ಸೌಜನ್ಯಾ ತಂದೆ ಚಂದಪ್ಪ ಗೌಡ, ತಾಯಿ ಕುಸುಮಾವತಿ, ಮಾವ ವಿಠಲ ಗೌಡ ಹಾಗೂ ಮನೆಯವರು ಉಪಸ್ಥಿತರಿದ್ದರು. ವಿವಿಧ ಸಂಘಟನೆಗಳ ಮುಖಂಡರಾದ ಜೀವನ್‌ರಾಜ್ ಕುತ್ಯಾರ್, ನ್ಯಾಯವಾದಿ ವಸಂತ ಮರಕಡ, ಡಾ ಹರಳೆ, ದಿನೇಶ್ ಗೌಡ ಮಲವಂತಿಗೆ, ಬಿ.ಕೆ. ವಸಂತ್, ದಾಮೋದರ ಭಟ್, ಸಂಜೀವ ಆರ್. ಮತ್ತಿತರರು ಉಪಸ್ಥಿತರಿದ್ದರು. 

ಐದೂವರೆ ಗಂಟೆ ಪ್ರತಿಭಟನೆ: ಉಪವಾಸ ಸತ್ಯಾಗ್ರಹ ಬೆಳಗ್ಗೆ 11ರಿಂದ 4.30ರವರೆಗೆ ಐದೂವರೆ ಗಂಟೆ ನಡೆಯಿತು. ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಿಂದ ಆಗಮಿಸಿದ ಸಾವಿರಾರು ಪ್ರತಿಭಟನಾಕಾರರು ಧರಣಿಯಲ್ಲಿ ಭಾಗವಹಿಸಿದ್ದರು. ಬಂದವರಲ್ಲಿ ಮಹಿಳೆಯರೇ ಹೆಚ್ಚಾಗಿದ್ದರು. 

ಬೆಳ್ತಂಗಡಿ ಡಿವೈಎಫ್‌ಐ ಕಚೇರಿಯಿಂದ ತಾಲೂಕು ಕಚೇರಿ ಮೈದಾನದವರೆಗೆ ಪ್ರತಿಭಟನಾಕಾರರು ಮೆರವಣಿಗೆ ಮೂಲಕ ಆಗಮಿಸಿದರು. ಸೌಜನ್ಯಾಳ ಹೆತ್ತವರು ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿದರೆ, ಜಿ.ವಿ. ಶ್ರೀ ರಾಮ ರೆಡ್ಡಿ ಸೌಜನ್ಯಾಳ ಭಾವಚಿತ್ರಕ್ಕೆ ಪುಷ್ಟಾರ್ಚನೆ ಮಾಡಿದರು. ಸಂಜೆ ಸೌಜನ್ಯಾಳ ಹೆತ್ತವರು ಪಾನೀಯ ಸೇವಿಸುವುದರೊಂದಿಗೆ ಉಪವಾಸ ಸತ್ಯಾಗ್ರಹ ಮುಕ್ತಾಯವಾಯಿತು. 

ಮುಂದಿನ ಹೆಜ್ಜೆಗಳು: ಅ. 21ರಂದು ಮುಖ್ಯಮಂತ್ರಿ ಮನೆ ಎದುರು ಪ್ರತಿಭಟನೆ, ನ. 1ರಂದು ಬೆಳ್ತಂಗಡಿಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರಿಪತಾಕೆ, ನವೆಂಬರ್ ಮೊದಲ ವಾರ ಮಂಗಳೂರಿನಿಂದ ಬೆಂಗಳೂರಿಗೆ ಕಾಲ್ನಡಿಗೆ ಜಾಥಾ. 

*ಸಚಿವರು, ಬಿಜೆಪಿ ಸಂಸದರು, ಹಿರಿಯ ಕಾಂಗ್ರೆಸ್ ಮುಖಂಡರು ನ್ಯಾಯ ಕೇಳುವವರ ವಿರುದ್ಧ ಕ್ರಮ ಕೆಗೊಳ್ಳುವ ಬೆದರಿಕೆಯೊಡ್ಡುತ್ತಿದ್ದಾರೆ. ಸೌಜನ್ಯಾಳ ಕೊಲೆಯಾದಾಗ ಕ್ರಮ ಕೆಗೊಳ್ಳಲು ಇವರೇಕೆ ಮುಂದಾಗಲಿಲ್ಲ ? ಸೌಜನ್ಯ ಪ್ರಕರಣದಲ್ಲಿ ಧ್ವನಿ ಎತ್ತಿದವರ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್, ಬಿಜೆಪಿಗರು ಒಂದಾಗಿದ್ದರು. - ಜಿ.ವಿ. ಶ್ರೀರಾಮ ರೆಡ್ಡಿ

Courtesy: Vijaya karnataka

On Sowjanya's birthday, students demand CBI probe into her death







On the birthday of Sowjanya, who was brutally raped and murdered a year ago in Beltangady, the All College Students’ Association paid condolence to her and protested by lighting candles, demanding a CBI probe into the case.
The protest was held in front of the DC office on Friday October 18.
Speaking to media persons, advocate Dinakar Shetty, president, All College Students’ Association, said, “It has been almost a year since the tragic incident took place and in order to get her justice we have organized a candlelight protest to show that we are with the students.”
Supporting the statement made by former union minister Janardhan Poojary in a press meet on Thursday October 17, Shetty said that the case should be handed over to the CBI soon. “The students’ association has staged various protests and demanded that the government give Rs 2 lac to the family but till date, our demand has not been met. The police officials and CoD were unsuccessful in tackling the case which is taking new turns as the days pass. Hence, it is necessary to hand over the case to the CBI as demanded by various political party leaders, various associations, and even the common public,” he said.
Condemning the allegations made against Dr Veerendra Heggade’s family, Shetty said that the case has now become a national level issue and the government should prioritize the case by handing it over to the CBI. “The investigation should be done soon, before evidences get destroyed,” he said.
Preethi Prabhakar, student of Canara Degree College, said, “We girls want freedom and these kinds of incidents have created fear in us. The case should soon be handed over to the CBI and justice must be done.”
Another student Varsha Prabhu said, “Sowjanya is like our sister. We want justice in the case. Culprits should be caught soon and given stringent punishment.”

Courtesy: Daya Kukkaje and Daiji world

Friday 18 October 2013

ಕುಮಾರಿ ಸೌಜನ್ಯಾಳ ಅಮಾನುಷ ಕೊಲೆಗೆ ನ್ಯಾಯ ಸಿಗಲೇಬೇಕು, ಆದರೆ..? - ಪ್ರತಾಪ್ ಸಿಂಹ



ಇದು ಪ್ರತಾಪ್ ಸಿಂಹರವರು ಇಂದಿನ ಬೆತ್ತಲೆ ಪ್ರಪಂಚ ಕಾಲಂನಲ್ಲಿ ಬರೆದಿರುವ ಲೇಖನ.

Justice For Kumari Sowjanya!

ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಎಸ್‌ಡಿಎಂ ಕಾಲೇಜಿನ ಕುಮಾರಿ ಸೌಜನ್ಯಾಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಂದಿಗೂ ಜೀವಂತವಿದ್ದರೆ, ಮತ್ತೆ ಸುದ್ದಿಗೆ ಗ್ರಾಸವಾಗಿ ಸಿಐಡಿ ತನಿಖೆ ಚುರುಕುಗೊಂಡಿದ್ದರೆ ಅದಕ್ಕೆ ಮೂಲ ಕಾರಣ ಈ ಮೇಲಿನ ಹೆಸರಿನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಸತತವಾಗಿ ನಡೆದ ಹೋರಾಟ. ಇವತ್ತು ಒಂದಿಷ್ಟು ಜನರು ಮುಂದೆ ಬಂದು ಟಿವಿ ಮಾಧ್ಯಮದ ಎದುರು ಧ್ವನಿಯೆತ್ತಿರಬಹುದು, ಆದರೆ ಪ್ರಕರಣವನ್ನು ಜೀವಂತವಾಗಿಟ್ಟಿದ್ದು ಮಾತ್ರ ಫೇಸ್‌ಬುಕ್ ಆ್ಯಕ್ಟಿವಿಸ್ಟ್‌ಗಳು ಅಥವಾ ಚಳವಳಿಕಾರರು/ಹೋರಾಟಗಾರರು ಎಂದರೆ ತಪ್ಪಾಗಲಾರದು. ಕಳೆದ ವರ್ಷ ದಕ್ಷಿಣ ಕನ್ನಡ ಬಿಜೆಪಿಯ ಕೆಲವು ರೋಗಗ್ರಸ್ಥ ಮನಸ್ಸುಗಳು ಕುಂದಾಪುರದ ವಾಜಪೇಯಿ ಎಂದೇ ಹೆಸರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಮನನೋಯಿಸಿ ಪಕ್ಷ ತೊರೆಯುವಂತೆ ಮಾಡಿದಾಗಲೂ ಫೇಸ್‌ಬುಕ್‌ನಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಆ ಆಕ್ರೋಶ ಹೋರಾಟದ ರೂಪ ಪಡೆಯುವುದಕ್ಕೂ, 2013ರ ಚುನಾವಣೆಯಲ್ಲಿ ಶ್ರೀನಿವಾಸ ಶೆಟ್ಟಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಅಭೂತಪೂರ್ವ ಗೆಲುವು ಸಾಧಿಸುವುದಕ್ಕೂ ಪರೋಕ್ಷವಾಗಿ ಕಾರಣವಾಗಿತ್ತು. ಹಾಗೆಯೇ ಸೌಜನ್ಯಾ ಕೊಲೆಯಾದ ನಂತರ ಸತತ ಒಂದು ವರ್ಷದಿಂದ ಫೇಸ್‌ಬುಕ್ ಆ್ಯಕ್ಟಿವಿಸ್ಟ್‌ಗಳು ಹೋರಾಟ ನಡೆಸುತ್ತಾ ಬಂದಿದ್ದಾರೆ.

Hats off to you guys!

ಅದರ ಬಗ್ಗೆ ಅನುಮಾನವೇ ಬೇಡ, ಹೀಗೆಂದರೆ ಖಂಡಿತ ಅತಿಶಯೋಕ್ತಿಯೂ ಆಗುವುದಿಲ್ಲ. ಒಂದು ಸಮಾಜ ತನ್ನ ಭಾಗವಾದ ಒಂದು ಕುಟುಂಬದ ನೋವಿಗೆ ಈ ಪರಿ ಸ್ಪಂದಿಸುತ್ತದೆ ಎಂದರೆ, ಆ ಘಟನೆ ಯುವ ಜನತೆಯ ಆತ್ಮಸಾಕ್ಷಿಯನ್ನು ಈ ರೀತಿ ಬಡಿದೆಬ್ಬಿಸುತ್ತದೆ ಎಂದರೆ ಅದು ಖಂಡಿತ ಒಳ್ಳೆಯ ಸಂಕೇತವೇ. ಸಮಾಜವೇ ಈ ಮಟ್ಟಕ್ಕೆ ಸಿಡಿದೇಳುತ್ತದೆ ಎಂದರೆ ಇನ್ನು ಹೆತ್ತು, ಹೊತ್ತು 17 ವರ್ಷ ಸಾಕಿ ಸಲುಹಿದ ಆ ಬಡ ಅಪ್ಪ-ಅಮ್ಮನ ನೋವು, ವೇದನೆಯ ತೀವ್ರತೆ ಎಷ್ಟಿರಬಹುದು? ಟಿವಿಯಲ್ಲಿ ಅವರು ಹೇಳುತ್ತಿರುವುದನ್ನು, ನಮ್ಮ ಮಗುವಿಗೆ ನ್ಯಾಯ ಕೊಡಿಸಿ ಎಂದು ಅಂಗಲಾಚುತ್ತಿರುವುದನ್ನು ನೋಡಿದಾಗಲಂತೂ ಕರುಳು ಹಿಂಡಿದಂಥ ಅನುಭವ ವೀಕ್ಷಕರಿಗಾಗುತ್ತಿತ್ತು. ಇನ್ನು ಆ ಅಪ್ಪ-ಅಮ್ಮನಿಗೆ ತಮ್ಮ ಮಗುವನ್ನು ಕಳೆದುಕೊಂಡ ನೋವು ಒಂದು ಕಡೆಯಾದರೆ, ವರ್ಷ ತುಂಬಿದರೂ ನ್ಯಾಯ ಸಿಗಲಿಲ್ಲವಲ್ಲಾ ಎಂಬ ಹತಾಶೆ ಇನ್ನೊಂದು ಕಡೆ. ಅವುಗಳ ಜತೆಗೆ ಸ್ಥಳೀಯ ಪೊಲೀಸರ ನಿಷ್ಕ್ರಿಯತೆ ಕಳೆದ ಒಂದು ವರ್ಷದಲ್ಲಿ ಪ್ರಕರಣದ ಬಗ್ಗೆ ಏನೆಲ್ಲಾ ಅನುಮಾನಗಳನ್ನು ಸೃಷ್ಟಿಸಿತು. ಯಾರೋ ಪ್ರಭಾವಿ ವ್ಯಕ್ತಿಗಳು ಇದರಲ್ಲಿ ಭಾಗಿಯಾಗಿದ್ದಾರೆ ಎಂಬ ಅನುಮಾನ, ಆ ಕಾರಣದಿಂದಲೇ ನ್ಯಾಯಸಮ್ಮತ ತನಿಖೆಯಾಗಿಲ್ಲ, ಆರೋಪಿಗಳನ್ನು ಪತ್ತೆ ಹಚ್ಚಿಲ್ಲ ಎಂಬ ಗಾಳಿ ಸುದ್ದಿ, ಕಿವಿಮಾತುಗಳು ಜತೆಗೂಡಿ ಸೌಜನ್ಯಾಳ ಅಪ್ಪ-ಅಮ್ಮನ ಮಾನಸಿಕ ನೆಮ್ಮದಿಯನ್ನು ಶಾಶ್ವತವಾಗಿ ಹಾಳು ಮಾಡಿದ್ದು ಮಾತ್ರವಲ್ಲ, ಸಮಾಜ ಕೂಡ ವ್ಯವಸ್ಥೆಯ ಮೇಲೆ ಅಪನಂಬಿಕೆ ಬೆಳೆಸಿಕೊಳ್ಳುವಂತಾಯಿತು. ಇದರ ಪರಿಣಾಮವಾಗಿ ಈಗ ಎದ್ದಿರುವ ಹಾಲಿ ಆಕ್ರೋಶ ಖಂಡಿತ ಒಪ್ಪುವಂಥದ್ದೇ. ಇವತ್ತು ಸೌಜನ್ಯಾಳನ್ನು ಆಕೆಯ ಅಪ್ಪ-ಅಮ್ಮ ಕಳೆದುಕೊಂಡಿರಬಹುದು, ಆದರೆ ಇಂಥ ಘಟನೆಗಳು ಸಮಾಜದಲ್ಲಿ ಹೆಣ್ಣು ಹೆತ್ತವರನ್ನೆಲ್ಲ ಆತಂಕದ ಕೂಪಕ್ಕೆ ದೂಡಿ ಬಿಡುವ ಅಪಾಯವೂ ಇದೆ. ಹಾಗಾಗಿ ಸೌಜನ್ಯಾ ಕೊಲೆಯ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷಿಸಲೇಬೇಕು ಹಾಗೂ ಅಂಥ ಘಟನೆಗಳು ಮರುಕಳಿಸದಂತೆ ವ್ಯವಸ್ಥೆ ಮತ್ತು ಸಮಾಜ ಎರಡೂ ನಿಗಾವಹಿಸಬೇಕು. ಈ ಕಾರಣಕ್ಕಾಗಿ ಸೌಜನ್ಯಾ ಪ್ರಕರಣ ಮತ್ತೆ ಸುದ್ದಿಯಾಗಿದ್ದು ಒಳ್ಳೆಯದೇ.

ಆದರೆ...

ಸೌಜನ್ಯಾಳಿಗೆ ನ್ಯಾಯ ಕೊಡಿಸುವ ಹೋರಾಟ/ಚರ್ಚೆ ಧರ್ಮಸ್ಥಳವೆಂಬ ಶ್ರೀಕ್ಷೇತ್ರದ ಮೇಲಿನ ವಿಶ್ವಾಸವನ್ನೇ ಹೊಡೆದು ಹಾಕುವ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ವೈಯಕ್ತಿಕ ತೇಜೋವಧೆ ಮಾಡುವ ಪ್ರಯತ್ನದ ರೂಪ, ಸಾಕ್ಷ್ಯರಹಿತ ಆರೋಪದ ಅಂಗವಾಗಿದ್ದು ಮಾತ್ರ ಸೌಜನ್ಯಾಳ ಕೊಲೆಯಷ್ಟೇ ದುರದೃಷ್ಟಕರ. ಕೆಟ್ಟದ್ದನ್ನು ಮಾತ್ರ ಅನುಮಾನಿಸದೆ, ಪರಾಮರ್ಶಿಸದೆ, ಅಳುಕದೆ, ಎರಡನೇ ಬಾರಿ ಯೋಚನೆ ಮಾಡದೆ ಯಥಾವತ್ತಾಗಿ ತೆಗೆದುಕೊಳ್ಳುವ ಸಮಾಜದ ಮಧ್ಯೆ ಇವತ್ತು ನಾವಿದ್ದೇವೆ. ನೀವು ಯಾರ ಬಳಿಯಲ್ಲಾದರೂ "ಸಿದ್ರಾಮಣ್ಣ ತುಂಬಾ ಒಳ್ಳೆಯವರು" ಅಂಥ ಹೇಳಿ, "ಇಲ್ಲಾ ಮಾರಾಯ, ಅವನು ಸರಿ ಇಲ್ಲ, ಕಳ್ಳ ಅಂಥ ಯಂಕಣ್ಣ ಹೇಳ್ತಿದ್ದ" ಎಂಬ ಮಾರುತ್ತರ ಬರುತ್ತದೆ. ಅದೇ "ಸಿದ್ರಾಮಣ್ಣ ಸರಿ ಇಲ್ವಂತೆ, ದುಡ್ ತಿನ್ತಾರಂತೆ" ಅನ್ನಿ, "ಹೌದು, ಸೀನಣ್ಣ ಅವತ್ತೇ ಹೇಳಿದ್ದ" ಎಂಬ ಉತ್ತರ ಬರುತ್ತದೆ. ನಮ್ಮ ಜನರ ಮನಸ್ಥಿತಿಯೇ ಅಂಥದ್ದು. ಕೆಟ್ಟದ್ದಕ್ಕೆ ಬೇಗ ಸಹಮತ ವ್ಯಕ್ತಪಡಿಸಿ ಬಿಡುತ್ತಾರೆ. ಹಾಗಾಗಿ ಇವತ್ತು ಸಮಾಜದಲ್ಲಿ ದೊಡ್ಡ ಮಟ್ಟಕ್ಕೇರಿದ್ದವರ ಬಗ್ಗೆ, ಜನರ ಮೆಚ್ಚುಗೆಗೆ ಪಾತ್ರರಾಗಿದ್ದವರ ಬಗ್ಗೆ ಬಹಳ ಸಲೀಸಾಗಿ ಕೆಟ್ಟದ್ದನ್ನು ಹೇಳಿ, ಅಹುದಹುದೆಂದು ತಲೆಯಾಡಿಸುವಂತೆ ಮಾಡಿಬಿಡಬಹುದು. ಬಹಳ ಬೇಸರದ ಸಂಗತಿಯೆಂದರೆ ನಮ್ಮ ಸಮಾಜದ, ಜನರ ಇಂಥ ದೌರ್ಬಲ್ಯವನ್ನು ಕೆಲವರು ಧರ್ಮಸ್ಥಳ ಹಾಗೂ ಅದರ ಧರ್ಮಾಧಿಕಾರಿಯಾದ ವೀರೇಂದ್ರ ಹೆಗ್ಗಡೆಯವರ ಬದ್ನಾಮಿ ಮಾಡಲು ಬಳಸಿಕೊಂಡರು ಎಂದನಿಸುವುದಿಲ್ಲವೇ? ಇಷ್ಟಕ್ಕೂ ವೀರೇಂದ್ರ ಹೆಗ್ಗಡೆಯವರು ಪತ್ರಿಕಾಗೋಷ್ಠಿ ನಡೆಸಿ ಸೌಜನ್ಯಾ ಪ್ರಕರಣ ನಡೆದಾಗ ತಮ್ಮ ಸಹೋದರನ ಪುತ್ರ ದೇಶದಲ್ಲೇ ಇರಲಿಲ್ಲ ಎಂಬುದನ್ನು ಸೂಕ್ತ ದಾಖಲೆಗಳೊಂದಿಗೆ ನಿರೂಪಿಸುವವರೆಗೂ ನಿಶ್ಚಲ್ ಹಾಗೂ ಕುಟುಂಬ ವರ್ಗವನ್ನು ಕಟಕಟೆ ಹಾಗೂ ಆರೋಪಿ ಸ್ಥಾನದಲ್ಲಿ ನಿಲ್ಲಿಸಿರಲಿಲ್ಲವೇ? ನಮ್ಮ ಸಮಾಜ ಹೇಗಿದೆಯೆಂದರೆ ಆರೋಪ ಮಾಡುವವರಿಗೆ ಸಾಕ್ಷ್ಯ ನೀಡುವ ಜವಾಬ್ದಾರಿಯೂ ಇರುವುದಿಲ್ಲ, ಕೇಳಿಸಿಕೊಳ್ಳುವವರು ಆಧಾರವನ್ನೂ ಕೇಳುವುದಿಲ್ಲ. ಸತ್ಯದ ಸರಳ ಸಾದರಕ್ಕಿಂತ Conspiracy Theoryಗಳು ಯಾವತ್ತೂ ರೋಚಕವಾಗಿರುತ್ತವೆ, ಖುಷಿ ಕೊಡುತ್ತವೆ. ಪತ್ರಿಕಾಗೋಷ್ಠಿಯ ನಂತರ ಮತ್ತೆ ನಡೆದ ಟಿವಿ ಚರ್ಚೆಯಲ್ಲಿ ಕಾಂಗ್ರೆಸ್ ನೇತಾರ ಹಾಗೂ ಮಾಜಿ ಸಚಿವರಾದ ಬಿ.ಎಲ್. ಶಂಕರ್ ಬಹಳ ಸ್ಫುಟವಾಗಿ ಇದನ್ನು ಎತ್ತಿ ತೋರಿಸಿದರು, ಅರ್ಥಗರ್ಭಿತವಾಗಿ ಮಾತನಾಡಿದರು. ಆ ಚರ್ಚೆಯಲ್ಲಿ ಭಾಗವಹಿಸಿದ್ದ ಸೌಜನ್ಯಾಳ ತಂದೆ-ತಾಯಿ-ಮಾವನನ್ನು ಪಾಟೀ ಸವಾಲಿಗೆ ಒಳಪಡಿಸಿದಾಗ 'ನಮಗೆ ಶ್ರೀಕ್ಷೇತ್ರದ ಮೇಲಾಗಲಿ, ವೀರೇಂದ್ರ ಹೆಗ್ಗಡೆಯವರ ಮೇಲಾಗಲಿ ಯಾವುದೇ ಅನ್ಯಥಾ ಭಾವನೆಯಿಲ್ಲ. ಹೆಗ್ಗಡೆಯವರು ಹೇಳಿದ ಮೇಲೆಯೇ ಪೊಲೀಸರು ಪ್ರಕರಣ ದಾಖಲಿಸಿದ್ದು, ಖುದ್ದು ಹೆಗ್ಗಡೆಯವರೇ ನಮ್ಮೆದುರಲ್ಲೇ ಗೃಹ ಸಚಿವರಿಗೆ ಕರೆ ಮಾಡಿ ತನಿಖೆಗೆ ಆಗ್ರಹಿಸಿದರು' ಎಂದರು. ಇನ್ನೂ ಗಮನಾರ್ಹ ಅಂಶವೆಂದರೆ 'ಧರ್ಮಸ್ಥಳಕ್ಕೆ ಸೇರಿದವರೇ ಇದನ್ನು ಮಾಡಿಸಿದ್ದಾರೆ ಎಂದು ಕೆಲವರು ನಮಗೆ ಹೇಳಿಕೊಟ್ಟರು' ಎಂಬ ಮಾತು ಸೌಜನ್ಯಾಳ ತಾಯಿಯ ಬಾಯಿಂದಲೇ ಹೊರಬಂತು!!

ಇದು ಏನನ್ನು ಸೂಚಿಸುತ್ತದೆ ಹೇಳಿ?

ಒಬ್ಬ ಸಾಮಾನ್ಯ ವ್ಯಕ್ತಿಗೇ ಮಿತ್ರ ಹಾಗೂ ಶತ್ರುಗಳಿರುತ್ತಾರೆ. ಹಾಗಿರುವಾಗ ಧರ್ಮಸ್ಥಳದಂಥ ಬೃಹತ್ ಕ್ಷೇತ್ರವನ್ನು ನಿಭಾಯಿಸುತ್ತಿರುವವರ ಬಗ್ಗೆಯೂ ಅಸಮಾಧಾನ ಹೊಂದಿರುವವರು ಖಂಡಿತ ಇರುತ್ತಾರೆ. ಅಂಥವರು ಸೌಜನ್ಯಾ ಪ್ರಕರಣವನ್ನು ತಮ್ಮ ವೈಯಕ್ತಿಕ ದ್ವೇಷಕ್ಕೆ ಪ್ರತೀಕಾರ ತೆಗೆದುಕೊಳ್ಳಲು, ಕೋಪ-ತಾಪಗಳನ್ನು ಹೊರಹಾಕಲು, ವೀರೇಂದ್ರ ಹೆಗ್ಗಡೆಯವರ ಹಾಗೂ ಶ್ರೀಕ್ಷೇತ್ರದ ಚಾರಿತ್ರ್ಯವಧೆ ಮಾಡಲು ಬಳಸಿಕೊಂಡರು ಎಂಬುದು ಸೌಜನ್ಯಾಳ ತಾಯಿಯ ಮಾತಿನಿಂದ ಪರೋಕ್ಷವಾಗಿ ಸ್ಪಷ್ಟವಾಗಲಿಲ್ಲವೇ? "ಧರ್ಮಸ್ಥಳದ ಬಗ್ಗೆ ನಮಗೆ ಯಾವ ಅನುಮಾನಗಳೂ ಇಲ್ಲ, ಶ್ರೀಕ್ಷೇತ್ರದ ಬಗ್ಗೆ ಕೆಟ್ಟದಾಗಿ ಮಾತನಾಡುವುದನ್ನು ನಾವು ಸಹಿಸುವುದಿಲ್ಲ" ಎಂದು ಚರ್ಚೆಯಲ್ಲಿ ಪಾಲ್ಗೊಂಡಿದ್ದ ಸೌಜನ್ಯಾಳ ಮಾವ ವಿಠ್ಠಲ ಗೌಡ ಕೂಡ ಹೇಳಿದರು. ಆದರೆ, ಪ್ರಾರಂಭದ ಚರ್ಚೆಯಲ್ಲಿ ಪಾಲ್ಗೊಂಡಿದ್ದವರು ಮಾಡಿದ್ದು ಧರ್ಮಸ್ಥಳದ ತೇಜೋವಧೆಯನ್ನೇ ಅಲ್ಲವೇ? ಇನ್ನು ನಿಶ್ಚಲ್ ಹಾಗೂ ಕುಟುಂಬ ವರ್ಗದ ಮೇಲೆ ಅನುಮಾನ ಬರುವಂತೆ ಆರಂಭದಲ್ಲಿ ಹೇಳಿದವರು ಹೆಗ್ಗಡೆಯವರು ಬಿಡುಗಡೆ ಮಾಡಿದ ದಾಖಲೆ ಹೇಳುತ್ತಿರುವ ಸತ್ಯಕ್ಕೆ ಯಾವ ಉತ್ತರ ಕೊಡಬಲ್ಲರು? ಅದಿರಲಿ, ಧರ್ಮಸ್ಥಳದವರು ರಕ್ಷಿಸುತ್ತಿದ್ದಾರೆ ಎಂದು ಟೀಕಾಕಾರರು ಬೊಟ್ಟುಮಾಡುತ್ತಿರುವ ಧೀರಜ್ ಕೆಲ್ಲಾ, ಉದಯ್ ಜೈನ್ ಮತ್ತು ಮಲ್ಲಿಕ್ ಜೈನ್ ಯಾರೆಂದುಕೊಂಡಿರಿ? ಧೀರಜ್ ಧರ್ಮಸ್ಥಳದ ಉದ್ಯೋಗಿಯೊಬ್ಬರ ಮಗನಾಗಿದ್ದರೆ, ಉದಯ್ ಜೈನ್ ಆಟೋ ಚಾಲಕ. ಮಲ್ಲಿಕ್ ಜೈನ್ ಧರ್ಮಸ್ಥಳದ ಒಬ್ಬ ಸಣ್ಣ ಉದ್ಯೋಗಿಯಷ್ಟೆ. ಧರ್ಮಸ್ಥಳದ ಪ್ರತಿಷ್ಠೆಯನ್ನು ಅಪಾಯಕ್ಕೆ ತಳ್ಳಿ ಇವರನ್ನು ರಕ್ಷಿಸುವ ಮೂರ್ಖ ಕೆಲಸವನ್ನು ಯಾರೂ ಮಾಡಲು ಸಾಧ್ಯವಿಲ್ಲ. ಖಂಡಿತ ಈ ಮೂವರ ಬಗ್ಗೆ ಸ್ಥಳೀಯರಲ್ಲಿ ಫಟಿಂಗರೆಂಬ ಭಾವನೆ ಇದೆ. ಹಾಗಾಗಿ ಅನುಮಾನಗಳಿಗೆ ಮತ್ತಷ್ಟು ಪುಷ್ಟಿ ಸಿಕ್ಕಿದಂತಾಯಿತು. ಹಾಗಂತ ಅವರ ಮೇಲಿನ ಅನುಮಾನಕ್ಕೆ ಹೆಗ್ಗಡೆಯವರನ್ನು ಕಟಕಟೆಗೆ ತಂದು ನಿಲ್ಲಿಸುವುದು ಎಷ್ಟು ಸರಿ? ತಪ್ಪಿತಸ್ಥರು ಯಾರೇ ಇದ್ದರೂ ಪತ್ತೆಹಚ್ಚಿ ಶಿಕ್ಷಿಸಬೇಕೆಂದು ತಮ್ಮ ಎದುರೇ ಗೃಹ ಸಚಿವರಿಗೆ ಹೆಗ್ಗಡೆಯವರು ಕರೆ ಮಾಡಿ ಒತ್ತಾಯಿಸಿದ್ದಾರೆಂದು ಸೌಜನ್ಯಾಳ ಪೋಷಕರೇ ಒಪ್ಪಿಕೊಂಡಿದ್ದರೂ ಚಾರಿತ್ರ್ಯ ವಧೆ ಮಾಡುವ ಪ್ರಯತ್ನವೇಕೆ? ಇನ್ನು ಮಾನಸಿಕ ಅಸ್ವಸ್ಥನಂತೆ ಕಾಣುವ ಆರೋಪಿ ಸಂತೋಷ್ ರಾವ್‌ನನ್ನು ಅಮಾಯಕನೆಂದು ಟೀಕಾಕಾರರು ಯಾವ ಆಧಾರದ ಮೇಲೆ ಸರ್ಟಿಫಿಕೆಟ್ ಕೊಡುತ್ತಿದ್ದಾರೆ? ಆತ ಉಮೇಶ್ ರೆಡ್ಡಿ, ಜೈ ಶಂಕರ್‌ನಂಥ ಮಾನಸಿಕ ರೋಗಿಯೂ ಆಗಿರಬಹುದಲ್ಲವೇ?

ಹಾಗಂತ...

ಶ್ರೀಕ್ಷೇತ್ರದಲ್ಲಿ ನಡೆಯುವುದೆಲ್ಲ ಧರ್ಮಕಾರ್ಯವೇ, ಅಲ್ಲಿ ಯಾವ ಲೋಪಗಳೂ ಇಲ್ಲ ಎಂದು ಖಂಡಿತ ಹೇಳುತ್ತಿಲ್ಲ. ದೇಶದ ಎಲ್ಲಡೆ ಇರುವಂತೆ ಬೆಳ್ತಂಗಡಿ ತಾಲೂಕಿನಲ್ಲೂ ರಿಯಲ್ ಎಸ್ಟೇಟ್ ಮಾಫಿಯಾ ಇದೆ. ಧರ್ಮಸ್ಥಳಕ್ಕೆ ಸೇರಿದ ಕೆಲವರು ಈ ವಿಷಯದಲ್ಲಿ ಅತಿರೇಕ ಎಸಗಿರುವುದು ಖಂಡಿತ ಸುಳ್ಳಲ್ಲ. ಧರ್ಮಸ್ಥಳ ಮಾಡುವ ಒಳ್ಳೆಯ ಕಾರ್ಯಗಳ ಕೀರ್ತಿಯೆಲ್ಲ ಹೆಗ್ಗಡೆಯವರಿಗೆ ಇಡಿಯಾಗಿ ಸಲ್ಲುವಂತೆ, ಕ್ಷೇತ್ರಕ್ಕೆ ಸೇರಿದವರ ಅತಿರೇಕಗಳಿಂದ ಬರುವ ಅಪಕೀರ್ತಿಯನ್ನೂ ಸ್ವೀಕರಿಸಬೇಕಾಗುತ್ತದೆ. ಮನೆ ಗೆದ್ದು ಮಾರು ಗೆಲ್ಲು ಎನ್ನುವಂತೆ ಬೆಳ್ತಂಗಡಿ ತಾಲೂಕಿನ ಸ್ಥಳೀಯರ ಸೂಕ್ಷ್ಮಭಾವನೆಗಳ ಬಗ್ಗೆಯೂ ಎಚ್ಚರಿಕೆಯಿಂದಿರಬೇಕಾಗುತ್ತದೆ. ಇನ್ನು ಗ್ರಾಮೀಣಾಭಿವೃದ್ಧಿ ಯೋಜನೆಯಲ್ಲಿ ಲೋಪವಿದೆ ಎಂಬ ಆರೋಪ ತೆಗೆದುಕೊಳ್ಳಿ. ಇವತ್ತು ಯಾವ ಯೋಜನೆ, ವ್ಯವಸ್ಥೆಯಲ್ಲಿ ಲೋಪವಿಲ್ಲ ಹೇಳಿ? ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆಜಿಗೆ ಒಂದು ರುಪಾಯಿಯಂತೆ ಕೊಟ್ಟ 30 ಕೆ.ಜಿ. ಅಕ್ಕಿ ಕಾಳಸಂತೆಗೆ ಬರುತ್ತಿಲ್ಲವೆ? ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉದ್ಯೋಗ ಖಾತ್ರಿ ಯೋಜನೆಯಲ್ಲೇ ಎಲ್ಲಿಲ್ಲದ ಭ್ರಷ್ಟಾಚಾರ ನಡೆದಿದೆ. 200 ಚಿಲ್ಲರೆ ವರ್ಷಗಳ ಇತಿಹಾಸ ಹೊಂದಿರುವ ಅಮೆರಿಕದ ಪ್ರಜಾಪ್ರಭುತ್ವ, ಐದಾರು ಶತಮಾನಗಳ ಇತಿಹಾಸ ಹೊಂದಿರುವ ಬ್ರಿಟನ್ ಹಾಗೂ 66 ವರ್ಷಗಳಿಂದಿರುವ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೂ ಲೋಪಗಳಿರುವಂತೆ ಧರ್ಮಸ್ಥಳವೂ ಕೆಲವು ಲೋಪಗಳಿಂದ ಹೊರತಾಗಿಲ್ಲ. ಒಂದು ವ್ಯವಸ್ಥೆಯೆಂದರೆ, ಅದರಲ್ಲಿ ಎಲ್ಲ ಥರದ ಜನರೂ ಇರುತ್ತಾರೆ, ಎಲ್ಲ ರೀತಿಯ ದೌರ್ಜನ್ಯಗಳೂ ನಡೆಯುತ್ತವೆ. ಹಾಗಂತ ಹೆಗ್ಗಡೆಯವರು ಪ್ರತಿಯೊಂದು ವಿಚಾರಗಳ ಮೇಲೂ ಖುದ್ದು ನಿಗಾ ಇಡಲು ಸಾಧ್ಯವೆ? ಪ್ರತಿಯೊಂದು ಲೋಪಗಳಿಗೂ ಹೆಗ್ಗಡೆಯವರನ್ನೇ ದೂಷಿಸುವುದು ಅಥವಾ ಕೆಲವೊಂದಿಷ್ಟು ಲೋಪಗಳಿಗಾಗಿ ಇಡೀ ವ್ಯವಸ್ಥೆಯನ್ನೇ ಸಾರಾಸಗಟಾಗಿ ದೂರುವುದು ಸರಿಯೇ? ಎಷ್ಟೋ ಜನ ಮಾಡಬಾರದ ಕೆಲಸ ಮಾಡಿ ಕೊನೆಗೆ ಹೆಗ್ಗಡೆಯವರ ಪಾದಕ್ಕೆ ಬಿದ್ದು ತಪ್ಪಾಯಿತು ಎಂದು ಕೇಳಿಕೊಂಡಿದ್ದಿದೆ. ಇನ್ನು ಮುಂದೆ ಹಾಗೆ ಮಾಡಬೇಡ ಎಂದು ಹೆಗ್ಗಡೆಯವರು ಹಸುವಿನಂತೆ ಕ್ಷಮಿಸಿದ್ದು, ಅದರಿಂದಾಗಿ ಹೆಗ್ಗಡೆಯವರ ಬಗ್ಗೆ ಕೆಲವರು ಅನ್ಯಥಾ ಭಾವಿಸುವಂತಾಗಿದ್ದೂ ಇದೆ.

ಇನ್ನೊಂದು ಸಂಗತಿ ಇದೆ, ಶ್ರೀಕ್ಷೇತ್ರದಂಥ ಬೃಹತ್ ವ್ಯವಸ್ಥೆಯೊಳಗೆ ನಡೆಯುವ ಎಷ್ಟೋ ವಿಚಾರಗಳು ಹೆಗ್ಗಡೆಯವರನ್ನು ತಲುಪುವುದಿಲ್ಲ ಹಾಗೂ ತಲುಪುವಾಗ ಅದು ಬೇರೆಯದೇ ರೂಪ ಪಡೆದಿರುತ್ತವೆ. ತಮಗೆ ತಲುಪಿದ್ದು ವಾಸ್ತವ ಸಂಗತಿಯೇ ಅಲ್ಲವೇ ಎಂದು ಖಚಿತಪಡಿಸಿಕೊಳ್ಳಲು ಹೆಗ್ಗಡೆಯವರ ಸ್ಥಾನದಲ್ಲಿ ಕುಳಿತಿರುವ ಯಾವ ವ್ಯಕ್ತಿಗೂ ಸಾಧ್ಯವಿಲ್ಲ. ಆದರೆ ಅನ್ಯಾಯಕ್ಕೊಳಗಾದವರು ಗಮನಕ್ಕೆ ತಂದಾಗ ಅದಕ್ಕೆ ಹೆಗ್ಗಡೆಯವರು ಸ್ಪಂದಿಸಿ, ತಪ್ಪಿಸಿದ ಅಗಣಿತ ಉದಾಹರಣೆಗಳು ಧರ್ಮಸ್ಥಳದಲ್ಲಿವೆ. ಹೆಗ್ಗಡೆಯವರು ಸಮಾಜ, ಜನರ ಬಗ್ಗೆ ತುಂಬಾ Compassion, ಅನುಕಂಪ, ಕಳಕಳಿ ಇಟ್ಟುಕೊಂಡಿರುವ ವ್ಯಕ್ತಿ. ಗ್ರಾಮಾಭಿವೃದ್ಧಿ ಯೋಜನೆಯಡಿ ಕೊಡುತ್ತಿರುವ ಸಾಲಕ್ಕೆ ವಿಪರೀತ ಬಡ್ಡಿ ಹಾಕಲಾಗುತ್ತಿದೆ ಎಂಬ ಅಂಶವನ್ನು ಟೀಕೆಯ ಅಸ್ತ್ರವಾಗಿಸಿಕೊಳ್ಳುವ ಬದಲು ಹೆಗ್ಗಡೆಯವರ ಗಮನಕ್ಕೆ ತಂದಿದ್ದರೆ ಈ ವೇಳೆಗಾಗಲೇ ಲೋಪವಿದ್ದರೆ ಸರಿಯಾಗಿರುತ್ತಿತ್ತು. ಇವತ್ತು ಧರ್ಮಸ್ಥಳಕ್ಕೆ ಯಾರೇ ಬರಲಿ, ಮಂಜುನಾಥನ ದರ್ಶನದ ಜತೆಗೆ ಹೆಗ್ಗಡೆಯವರನ್ನು ಭೇಟಿಯಾಗುವುದಕ್ಕೂ ಬಯಸುತ್ತಾರೆ. ನಮ್ಮ ಮುಖ್ಯಮಂತ್ರಿಗಳು ಜನತಾದರ್ಶನ ಮಾಡದೇ ಇರಬಹುದು, ಹೆಗ್ಗಡೆಯವರು ಜನತಾದರ್ಶನವನ್ನು ಶಿಸ್ತು, ಶ್ರದ್ಧೆಯಿಂದ ಮಾಡುತ್ತಾರೆ. ಅಪ್ಪ-ಮಕ್ಕಳ ನಡುವೆ ನಡೆಯುವ ವಿವಾದಗಳನ್ನು ಅವರ ಮುಂದೆ ಹೇಳಿಕೊಳ್ಳುತ್ತಾರೆ ಹಾಗೂ ಹೆಗ್ಗಡೆಯವರು ಸ್ಪಂದಿಸುತ್ತಾರೆ. ಹಾಗಿರುವಾಗ ಶ್ರೀಕ್ಷೇತ್ರದ ಯಾವುದೋ ವ್ಯಕ್ತಿಗಳಿಂದ ತಮಗೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರೇಕೆ ಹೆಗ್ಗಡೆಯವರ ಬಳಿ ಹೇಳಿಕೊಳ್ಳಬಾರದು? ಹಾಗೆ ಹೇಳಿಕೊಂಡರೂ ತೊಂದರೆ ತಪ್ಪಲಿಲ್ಲ ಎನ್ನುವ ಏಕೈಕ ಉದಾಹರಣೆಯನ್ನು ಟೀಕಾಕಾರರು ಕೊಡಬಲ್ಲರೇ? ಒಂದು ಲೋಪವನ್ನು ಎತ್ತಿತೋರುವ ಮೊದಲು ಆ ವ್ಯಕ್ತಿಯಿಂದ ಸಮಾಜಕ್ಕೆ ಆಗುತ್ತಿರುವ ಲಾಭವನ್ನು ಅಳೆದು ತೂಗಬೇಕು.

ವೀರೇಂದ್ರ ಹೆಗ್ಗಡೆಯವರು ಜನಿಸಿದ್ದು 1948, ನವೆಂಬರ್ 25ರಂದು. ಧರ್ಮಸ್ಥಳದ ಚುಕ್ಕಾಣಿ ಹಿಡಿದಿದ್ದು 1968ರಲ್ಲಿ. ತಂದೆ ರತ್ನವರ್ಮ ಹೆಗ್ಗಡೆಯವರ ಅಕಾಲಿಕ ನಿಧನ ಅತ್ಯಂತ ಚಿಕ್ಕವಯಸ್ಸಿನಲ್ಲಿಯೇ ಅತಿ ಭಾರವಾದ ಜವಾಬ್ದಾರಿಯನ್ನು ಹೆಗಲಿಗೆ ಹಾಕಿತು. ಒಬ್ಬ ವ್ಯಕ್ತಿಯ ನಿಜವಾದ ಗುಣವನ್ನು ಅರಿಯಬೇಕಾದರೆ ಆತನಿಗೆ ಅಧಿಕಾರ ಕೊಟ್ಟು ನೋಡಬೇಕು ಎಂಬ ಮಾತಿದೆ. ಚುನಾವಣೆಗೆ ಮೊದಲು ನಮ್ಮ ಕೈ, ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಿದ ಮೇಲೆ ನಮ್ಮ ವಿಶ್ವಾಸವನ್ನು ಶೇಕ್ ಮಾಡುವ ರಾಜಕಾರಣಿಗಳನ್ನು ನೋಡಿರುವ ನಮಗೆ ಅಧಿಕಾರದಿಂದ ಬರುವ ಮದದ ಪರಿಚಯ ಚೆನ್ನಾಗಿಯೇ ಆಗಿದೆ. ಹಾಗಿರುವಾಗ ಇಪ್ಪತ್ತರ ಕಿರಿ ವಯಸ್ಸಿನಲ್ಲಿ ಪಟ್ಟಕ್ಕೇರಿದ ಹೆಗ್ಗಡೆಯವರೂ ತಪ್ಪೆಸಗಬಹುದಾದ, ದರ್ಪದಲ್ಲಿ ಅಚಾತುರ್ಯಗಳಿಗೆ ಅವಕಾಶವೀಯಬಹುದಾದ ಎಲ್ಲ ಸಾಧ್ಯತೆಗಳೂ ಇದ್ದವು. ಆದರೆ ಹಾಗಾಗಲಿಲ್ಲ.

ಅದಕ್ಕೆ ಬಹುಶಃ ರತ್ನವರ್ಮ ಹೆಗ್ಗಡೆಯವರೇ ಕಾರಣವಿದ್ದಿರಬಹುದು.

ಯಾವುದಾದರೂ ಹುಡುಗನಿಗೆ ಅಪ್ಪ-ಅಮ್ಮ ಯಾರೂ ಇಲ್ಲ, ಇದ್ದರೂ ತಿನ್ನುವುದಕ್ಕೇ ಗತಿಯಿಲ್ಲ ಎಂದಾಗಿದ್ದರೆ ಆತನನ್ನು ಸಿದ್ಧಗಂಗಾ ಮಠಕ್ಕೆ ಬಿಟ್ಟು ಬನ್ನಿ, ಶ್ರೀ ಶಿವಕುಮಾರ ಸ್ವಾಮೀಜಿಗಳ ಸುಪರ್ದಿಗೆ ವಹಿಸಿ ಬಿಡಿ ಉದ್ಧಾರವಾಗುತ್ತಾನೆ ಎನ್ನುವುದನ್ನು ಉತ್ತರ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಕಾಣಬಹುದು. ಹಾಗೆಯೇ ದಕ್ಷಿಣ ಕನ್ನಡದಲ್ಲಿ ಉಚಿತ ಅನ್ನ ಹಾಗೂ ಅಕ್ಷರ ದಾಸೋಹವೆಂದ ಕೂಡಲೇ ನೆನಪಿಗೆ ಬರುತ್ತಿದ್ದುದು ಉಜಿರೆಯ ರತ್ನಮಾನಸ ಹಾಗೂ ಸಿದ್ಧವನ ಗುರುಕುಲ. ಎಷ್ಟೋ ಬಡಮಕ್ಕಳು ಬರಿಗೈಲಿ ಬಂದು ಪದವಿ ಸರ್ಟಿಫಿಕೆಟ್‌ನೊಂದಿಗೆ ಇಲ್ಲಿಂದ ಹೊರ ಹೋಗಿದ್ದಾರೆ. ಇವು ರತ್ನವರ್ಮ ಹೆಗ್ಗಡೆಯವರು ಬಡಮಕ್ಕಳಿಗಾಗಿಯೇ ಕಟ್ಟಿಸಿದ ಗಂಜಿಕೇಂದ್ರವೆಂದರೂ ತಪ್ಪಾಗದು. ಬಹಳ ಇತ್ತೀಚಿನವರೆಗೂ ಒಂದೇ ಪ್ಯಾಂಟು ವಾರದ 6 ದಿನವೂ ಕಾಲೇಜಿನ ಬೇರೆ ಬೇರೆ ಕ್ಲಾಸ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದೆಯೆಂದರೆ ಅದು ಸಿದ್ಧವನದ ಯಾವುದೋ ಒಬ್ಬ ವಿದ್ಯಾರ್ಥಿಯದ್ದು, ಉಳಿದವರು ಸರದಿಯ ಮೇಲೆ ಹಾಕಿಕೊಳ್ಳುತ್ತಿದ್ದಾರೆ ಎಂದು ಆಡಿಕೊಳ್ಳುವ ಸನ್ನಿವೇಶವಿತ್ತು. ಅಂಥ ಬಡ ಹಿನ್ನೆಲೆಯಿಂದ ಬಂದವರೇ ಸಿದ್ಧವನದಲ್ಲಿರುತ್ತಿದ್ದರು. ತನ್ನ ಮಗನಿಗೂ ಪರಿಸ್ಥಿತಿಯ ಪರಿಚಯವಾಗಬೇಕು, ಬಡವರ ನೋವು ಅರ್ಥವಾಗಬೇಕು, ಕಷ್ಟದಲ್ಲಿ ಜೀವನ ನಡೆಸುವುದು, ಕಷ್ಟಗಳ ನಡುವೆಯೂ ಕಲಿತು ಮೇಲೆ ಬರುವುದನ್ನು ಕಲಿಸಬೇಕು ಎಂಬ ಆಶಯದಿಂದ ರತ್ನವರ್ಮ ಹೆಗ್ಗಡೆಯವರು ವೀರೇಂದ್ರ ಹೆಗ್ಗಡೆಯವರನ್ನೂ ಸಿದ್ಧವನಕ್ಕೆ ಸೇರಿಸಿದ್ದರು. ಹಾಗೆ ಸೇರಿಸಿದ ಕಾರಣದಿಂದಲೋ ಏನೋ ಹೆಗ್ಗಡೆಯವರು ಒಬ್ಬ ಟಿಪಿಕಲ್ ಸ್ವಾಮಿ ಅಥವಾ ಧರ್ಮಾಧಿಕಾರಿಯಾಗುವ ಬದಲು ಪಟ್ಟಕ್ಕೇರಿದ ಮೇಲೆ ಅವರಲ್ಲಿ ಸಮಾಜ ಸುಧಾರಣೆಯ ತುಡಿತ ಕಾಣತೊಡಗಿತು. ಹಾಗಾಗಿಯೇ 1995ರಲ್ಲಿ ಬೆಳ್ತಂಗಡಿ ತಾಲೂಕಿನಿಂದ ಮದ್ಯಪಾನ ಸಮಸ್ಯೆಯನ್ನು ನಿರ್ಮೂಲನೆ ಮಾಡಲು ಹೆಗ್ಗಡೆಯವರು ಮುಂದಾದರು. 'ಕಳಿ, ಗಂಗಸರ ಬುಡ್ಕ, ತೆಳಿಗಂಜಿ ಪರ್ಕ' (ಹೆಂಡ, ಸಾರಾಯಿ ಬಿಡೋಣ: ತಿಳಿ ಗಂಜಿ ಕುಡಿಯೋಣ) ಎಂಬ ಅವರ ಸ್ಲೋಗನ್‌ಗಳು ಭಿತ್ತಿಪತ್ರಗಳಿಗೆ ಸೀಮಿತವಾಗಲಿಲ್ಲ. ಮನೆ ಮನೆಗಳಿಗೆ ಹೋಗಿ ಮದ್ಯವ್ಯಸನಿ ಕುಟುಂಬಗಳ ಸಮಸ್ಯೆಗಳನ್ನು ತಿಳಿದುಕೊಳ್ಳುವ ಕೆಲಸ ಆರಂಭಿಸಿದರು. ಮೊದಲು ಸಮಸ್ಯೆಗಳಿಗೆ ಪರಿಹಾರ ಸೂಚಿಸಿ, ನಂತರ ಮದ್ಯಪಾನ ನಿಲ್ಲಿಸಿ ಎಂದು ತಿಳಿಹೇಳುವ ಕೆಲಸ ಮಾಡಿದರು. ಸಾಮಾನ್ಯವಾಗಿ ಮದ್ಯಪಾನ ವ್ಯಸನಗಳು ಕಾಡುವುದು ಸಣ್ಣ ಹಾಗೂ ಅರೆ ಕೃಷಿಕರು, ಭೂರಹಿತ ಕಾರ್ಮಿಕರನ್ನೇ. ಹಾಗಾಗಿ ಇಂಥ ದುರ್ಬಲ ವರ್ಗಗಳ ಶ್ರೇಯೋಭಿವೃದ್ಧಿಗಾಗಿ 1996ರಲ್ಲಿ 'ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ' (SKDRDP)ಯನ್ನು ಆರಂಭಿಸಿದರು. 'ಪ್ರಗತಿ ನಿಧಿ' ಎಂಬ ಕಾರ್ಯಕ್ರಮದಡಿ ಕೃಷಿಕರು ಹಾಗೂ ಅಗತ್ಯವಿರುವವರಿಗೆ ಯಾವುದೇ ತಲೆನೋವು ಕೊಡದೆ ಸಾಲ ನೀಡಲು ಆರಂಭಿಸಿದರು. 'ಸ್ವ-ಸಹಾಯ' ಗುಂಪುಗಳನ್ನು ಆರಂಭಿಸಿ ಅಂಥ ಗುಂಪುಗಳೂ ಸಾಲ ಪಡೆದುಕೊಳ್ಳಬಹುದಾದ ಅವಕಾಶ ಕಲ್ಪಿಸಿದರು. ಈ ಯೋಜನೆ ಹಾಗೂ ಸ್ವ-ಸಹಾಯ ಪದ್ಧತಿಯಿಂದಾಗಿ ಎಷ್ಟೋ ಬಡವರು ಸ್ವಂತ ಗೂಡು ಕಟ್ಟಿಕೊಂಡಿದ್ದಾರೆ, ಅವರ ಮಕ್ಕಳು ಶಾಲೆಯ ಮುಖ ನೋಡುತ್ತಿದ್ದಾರೆ, ಕುಡಿತ ಬಿಟ್ಟಿದ್ದಾರೆ. ಗ್ರಾಮೀಣಾಭಿವೃದ್ಧಿ ಯೋಜನೆಯನ್ನು ಟೀಕಿಸುವವರು ಈ ಅಂಶಗಳನ್ನೂ ಪರಿಗಣಿಸಬೇಕಾಗುತ್ತದೆ.

ಈ ಹಿನ್ನೆಲೆಯಲ್ಲಿ ಸೌಜನ್ಯಾಳಿಗೆ ನ್ಯಾಯ ಕೊಡಿಸುವ ಆವೇಶದಲ್ಲಿ ಆ ಪ್ರಕರಣವನ್ನು ಶ್ರೀಕ್ಷೇತ್ರ ಹಾಗೂ ಅದರ ಧರ್ಮಾಧಿಕಾರಿಯವರ ತೇಜೋವಧೆ ಮಾಡುವ ಅಸ್ತ್ರವನ್ನಾಗಿ ಮಾಡಿಕೊಳ್ಳುವುದು ಬೇಡ. ಅಸಾರಾಮ್ ಬಾಪು, ನಿತ್ಯಾನಂದನಂಥವರು ಜನರ ವಿಶ್ವಾಸ, ನಂಬಿಕೆಗೆ ಖಂಡಿತ ಕೊಡಲಿ ಏಟು ಹಾಕಿದ್ದಾರೆ. ಹಾಗಂತ ಎಲ್ಲರನ್ನೂ ಅಪನಂಬಿಕೆಯಿಂದ ನೋಡುವುದು, ಆ ಮೂಲಕ ಜನರ ನಂಬಿಕೆ, ವಿಶ್ವಾಸವನ್ನೇ ಹಾಳುಗೆಡವುದು ಇಂಥ ಪ್ರಯತ್ನಗಳಿಂದಾಗಿ ಹಿನ್ನಡೆಯಾಗುವುದು ಹಿಂದು ಧರ್ಮಕ್ಕೇ ಎಂಬುದನ್ನು ಭಗವಾಧ್ವಜ ಹಿಡಿದು ಬೀದಿಗಿಳಿದಿದ್ದವರು ಅರ್ಥಮಾಡಿಕೊಳ್ಳಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ, ಅಲ್ಪಸಂಖ್ಯಾತ ಕೋಮಿಗೆ ಸೇರಿದ ಕೆ.ಜೆ. ಜಾರ್ಜ್ ಗೃಹ ಸಚಿವರಾಗಿದ್ದಾರೆ. ಖಂಡಿತ ಅವರ ಬಳಿ ನಿಷ್ಪಕ್ಷಪಾತ ತನಿಖೆ, ನ್ಯಾಯ ಕೇಳೋಣ. ಹಾಲಿ ಸಿಐಡಿ ತನಿಖೆಯ ಪ್ರಾರಂಭಿಕ ಸಂಕೇತಗಳು ಸಂತೋಷ್ ರಾವ್‌ನತ್ತಲೇ ಬೆರಳು ತೋರುತ್ತಿವೆ. ವರದಿ ಹೊರಬಿದ್ದ ನಂತರವೂ ಅನುಮಾನವಿದ್ದರೆ ಸಿಬಿಐ ತನಿಖೆಗೆ ಒತ್ತಾಯಿಸೋಣ. ಎಷ್ಟೋ ಸಲ ಮಕ್ಕಳು ಮಾಡಿದ ತಪ್ಪಿಗೆ ಅಪ್ಪ-ಅಮ್ಮ ತಲೆ ಕೊಡಬೇಕಾಗುತ್ತದೆ. ಒಂದು ವೇಳೆ ನಿಶ್ಚಲ್ ತಪ್ಪಿತಸ್ಥನೆಂದು ಸಾಬೀತಾದರೆ ಧರ್ಮಸ್ಥಳದಿಂದ ಹೊಣೆಗಾರಿಕೆ ಕೇಳೋಣ. ಆದರೆ ಈಗ್ಗೆ ಹದಿನೈದು ದಿನಗಳ ಹಿಂದಷ್ಟೇ ಬೀದರ್‌ನ ಬಿಜೆಪಿ ಕಾರ್ಯದರ್ಶಿ ಬಾಬುವಾಲಿಯನ್ನು ಬೆಳಗ್ಗಿನಿಂದ ಸಂಜೆಯವರೆಗೂ ಬದ್ನಾಮಿ ಮಾಡಿದ ಮಾಧ್ಯಮಗಳು ಮರುದಿನ ಸಣ್ಣ ಕ್ಷಮೆ ಕೇಳಿದ ಘಟನೆಯನ್ನು ಮರೆಯಬೇಡಿ. ಹಾಗಾಗಿ ಆಧಾರ ರಹಿತ ಆರೋಪಗಳ ಮೂಲಕ ಶ್ರೀಕ್ಷೇತ್ರದ ಮೇಲಿನ ನಂಬಿಕೆ, ವಿಶ್ವಾಸ ಒಡೆಯುವುದು ಬೇಡ.

ಅಂಥ ದೇದೀಪ್ಯಮಾನನಾದ ಸೂರ್ಯನಿಗೇ ಗ್ರಹಣ ಹಿಡಿಯುತ್ತದೆ. ಇನ್ನು ಸಾಮಾನ್ಯ ಮನುಷ್ಯರು ಯಾವ ಲೆಕ್ಕ? ಹಾಗಾಗಿ ಶ್ರೀ ವೀರೇಂದ್ರ ಹೆಗ್ಗಡೆಯವರು ಈ ಘಟನೆಯಿಂದ ಅಧೀರರಾಗದೆ, ಆದರೆ ಮುಂದೆ ಎಚ್ಚರಿಕೆಯಿಂದ ತಮ್ಮ ಸಮಾಜಸೇವೆಯನ್ನು ಎಂದಿನಂತೆ ಮುಂದುವರಿಸಿ ಕೊಂಡು ಹೋಗುವಂತಾಗಲಿ.

ಪ್ರತಾಪ್ ಸಿಂಹ

ಧರ್ಮಸ್ಥಳದ ಸೌಜನ್ಯಾಗಾಗಿ ಒಂದಾದ ಜನತೆ



ಸೌಜನ್ಯಾ ಕೊಲೆ: ಸಿಬಿಐ ತನಿಖೆಯಾಗಲಿ;ನ್ಯಾಯಕ್ಕಾಗಿ ಬೆಳ್ತಂಗಡಿಯಲ್ಲಿ ಉಪವಾಸ

ನ್ಯಾಯ ಸಿಗುವವರೆಗೂ ಹೋರಾಟ ,ಬೆದರಿಕೆಗೆ ಬಗ್ಗುವುದಿಲ್ಲ: ಕೇಮಾರು ಶ್ರೀ
ಬೆಳ್ತಂಗಡಿ, ಅ.18: ಬೆಳ್ತಂಗಡಿಯ ‘ನಿರ್ಭಯಾ’ ಎಂದೇ ಗುರುತಿಸಲ್ಪಟ್ಟ ಸೌಜನ್ಯಾಳ ಅತ್ಯಾಚಾರ, ಕಗ್ಗೊಲೆ ಪ್ರಕರಣ ಇದೀಗ ತೀವ್ರ ರೂಪವನ್ನು ಪಡೆದುಕೊಂಡಿದೆ. ಶುಕ್ರವಾರ ಬೆಳಗ್ಗೆ ಬೆಳ್ತಂಗಡಿಯಲ್ಲಿ ಸೇರಿದ ಸಹಸ್ರಾರು ಪ್ರತಿಭಟನಕಾರರು ದಿನವಿಡೀ ಉಪವಾಸ ಸತ್ಯಾಗ್ರಹದ ಮೂಲಕ ಸಿಬಿಐ ತನಿಖೆಗೆ ಒತ್ತಾಯಿಸಿದರು. ಮೃತಪಟ್ಟ ಸೌಜನ್ಯಾಳ ಹುಟ್ಟಿದ ದಿನವೂ ಇಂದೇ ಆಗಿದ್ದು, ವಿವಿಧ ರಾಜಕೀಯ ಮುಖಂಡರು, ಸ್ವಾಮೀಜಿಗಳು ಈ ಉಪವಾಸದಲ್ಲಿ ಭಾಗಿಯಾಗಿದ್ದಾರೆ. ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದ ಸಿಪಿಎಂ ರಾಜ್ಯ ಕಾರ್ಯದರ್ಶಿ ಜಿ.ವಿ.ಶ್ರೀರಾಮ ರೆಡ್ಡಿ, ಈ ಹಿಂದೆ ಧರ್ಮಸ್ಥಳದಲ್ಲಿ ಪದ್ಮಲತಾರನ್ನು ಅತ್ಯಾಚಾರಗೈದು ಕೊಲೆಗೈಯಲಾಗಿತ್ತು. ಇದೀಗ ಸೌಜನ್ಯಾಳ ಅತ್ಯಾಚಾರ-ಕೊಲೆ ಯಾಗಿದೆ. ಇದು ಇಲ್ಲಿಗೇ ನಿಲ್ಲಬೇಕು. ಅದಕ್ಕಾಗಿ ಈ ಹೋರಾಟ. ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿ ನ್ಯಾಯ ಸಿಗುವವರೆಗೂ ಈ ಹೋರಾಟ ಮುಂದುವರಿಯಲಿದೆ ಎಂದು ಘೋಷಿಸಿದರು.

ಈ ಹೋರಾಟ ಯಾವುದೇ ಧರ್ಮ ಅಥವಾ ವ್ಯಕ್ತಿಯ ವಿರುದ್ಧವಲ್ಲ. ಇದು ವ್ಯವಸ್ಥೆಯ ವಿರುದ್ಧದ ಹೋರಾಟವಾಗಿದೆ.ಸೌಜನ್ಯಾ ಪ್ರಕರಣದ ತನಿಖೆ ನಡೆಸುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಪೊಲೀಸರು ಕೊಲೆಗಾರರನ್ನು ಬಂಧಿಸುವ ಬದಲು ದೌರ್ಜನ್ಯದ ವಿರುದ್ಧ ಧ್ವನಿ ಎತ್ತುವವರನ್ನು ದಮನಿಸಲು ಹೊರಟಿದ್ದಾರೆ. ನೊಂದವರ ಪರವಾಗಿ ನಿಲ್ಲಬೇಕಾಗಿದ್ದ ಸರಕಾರ ಇದೀಗ ಶೋಷಕರ ಪರ ನಿಂತಿದೆ.

ಸಚಿವರಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಸಂಸದ ನಳಿನ್ ಕುಮಾರ್ ಕಟೀಲರು, ಮಾಜಿ ಸಚಿವ ಜನಾರ್ದನ ಪೂಜಾರಿ ನ್ಯಾಯ ಕೇಳುವವರ ವಿರುದ್ಧ ಕ್ರಮ ಕೈಗೊಳ್ಳುವ ಬೆದರಿಕೆಯೊಡ್ಡುತ್ತಿದ್ದಾರೆ. ಸೌಜನ್ಯಾಳ ಕೊಲೆಯಾದಾಗ ಕ್ರಮ ಕೈಗೊಳ್ಳಲು ಇವರೇಕೆ ಮುಂದಾಗಲಿಲ್ಲ ಎಂದು ಶ್ರೀರಾಮ ರೆಡ್ಡಿ ಪ್ರಶ್ನಿಸಿದರು.ಧರ್ಮದ ಮುಖವಾಡ ಹಾಕಿಕೊಂಡವರು ಧರ್ಮವನ್ನು ಕೆಡಿಸುವ ಕಾರ್ಯ ಮಾಡುತ್ತಿದ್ದಾರೆ.

ಇಂಥವರ ವಿರುದ್ಧ ಜನ ಎಚ್ಚರಗೊಳ್ಳಬೇಕಾದ ಅಗತ್ಯವಿದೆ ಎಂದ ಅವರು, ಸೌಜನ್ಯಾ ಪ್ರಕರಣದಲ್ಲಿ ಧ್ವನಿ ಎತ್ತಿದವರ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಬಿಜೆಪಿಗರು ಒಂದಾಗಿದ್ದರು. ಅವರಿಗೆ ಸೌಜನ್ಯಾಳ ನೋವಿಗಿಂತಲೂ ದೊಡ್ಡವರಿಗಾಗಿರುವ ಅಪಮಾನವೇ ಮುಖ್ಯ ವಿಷಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅನ್ಯಾಯದ ವಿರುದ್ಧ ಮಹಿಳೆಯರು ಧ್ವನಿಯೆತ್ತಲಿ: ಕೇಮಾರು ಶ್ರೀ ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಕೇಮಾರು ಈಶ ವಿಠ್ಠಲದಾಸ ಸ್ವಾಮೀಜಿ, ಸೌಜನ್ಯಾಳಿಗೆ ನ್ಯಾಯ ಕೊಡಿಸಲು ಜಾತಿ, ಧರ್ಮ, ಪಕ್ಷ, ಭೇದ ಮರೆತು ಎಲ್ಲರೂ ಒಂದಾಗಿ ನ್ಯಾಯಕ್ಕಾಗಿ ಹೋರಾಡಬೇಕಾಗಿದೆ. ತಮ್ಮ ಮಗಳಿಗಾದ ಅನ್ಯಾಯ ಎಂದು ಭಾವಿಸಿ ಮಹಿಳೆಯರೆಲ್ಲರೂ ಧ್ವನಿಯೆತ್ತುವಂತಾಗಬೇಕು. ಇದು ಯಾವುದೇ ಧಾರ್ಮಿಕ ಕೇಂದ್ರ ಅಥವಾ ವ್ಯಕ್ತಿಯ ವಿರುದ್ಧದ ಹೋರಾಟವಲ್ಲ. ಸೌಜನ್ಯಾಳ ಸಾವಿಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು ಎಂಬ ಗುರಿಯೊಂದಿಗೆ ಹೋರಾಟ. ಇದರಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದರು. ತನಿಖೆಯ ದಾರಿ ತಪ್ಪಿಸುವವರು ಯಾರು ಎಂದು ಅನ್ಯಾಯಕ್ಕೊಳಗಾದ ಸೌಜನ್ಯಾಳ ಮನೆಯವರು ಹೇಳಲಿ.

ಸೌಜನ್ಯಾಳ ಪರ ಮಾತನಾಡಿದರೆ ಖಾವಿ ಬಿಚ್ಚಿಸುವ ಹಾಗೂ ದೌರ್ಜನ್ಯ ನಡೆಸುವ ಮಾತನ್ನಾಡಿದ್ದಾರೆ. ಆದರೆ ಯಾವುದೇ ಬೆದರಿಕೆಯಿಂದಲೂ ಈ ಹೋರಾಟ ನಿಲ್ಲುವುದಿಲ್ಲ ಎಂದು ಕೇಮಾರು ಶ್ರೀ ಸ್ಪಷ್ಟಪಡಿಸಿದರು.ಡಿವೈಎಫ್‌ಐ ಜಿಲ್ಲಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, ಜಿಲ್ಲೆಯ ಜನ ನಾಯಕರೆನಿಸಿಕೊಂಡವರೆಲ್ಲ ನ್ಯಾಯದ ಪರ ನಿಲ್ಲದೆ ಯಾರದೋ ಬೆಂಬಲಕ್ಕೆ ಮುಂದಾಗುತ್ತಿದ್ದಾರೆ. ಜನತೆಯ ಮನಸ್ಸಿನಲ್ಲೇನಿದೆ ಎಂಬುದನ್ನು ಅರಿತು ಈ ನಾಯಕರು ವರ್ತಿಸಲಿ. ಸಚಿವ ವಿನಯ ಕುಮಾರ್ ಸೊರಕೆ ಬಹಿರಂಗವಾಗಿಯೇ ಸರಕಾರ ಯಾರ ಪರ ಇದೆ ಎಂದು ಹೇಳಿಕೊಂಡಿದ್ದಾರೆ. ಸಮಾಜವಾದಿ ನಾಯಕ ಸಿದ್ದರಾಮಯ್ಯ ಈಗಲಾದರೂ ಎಚ್ಚೆತ್ತುಕೊಳ್ಳಲಿ ಎಂದರು.

ಜನಪರ ಹೋರಾಟಗಾರ್ತಿ ಅಮೃತಾ ಶೆಟ್ಟಿ ಆತ್ರಾಡಿ ಮಾತನಾಡಿ, ಯಾವುದೇ ಕಾರಣಕ್ಕೂ ಇಂತಹ ದೌರ್ಜನ್ಯವನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಇಂತಹ ಕ್ರೌರ್ಯವನ್ನು ಮೆರೆದವರು ಯಾರೇ ಆಗಲಿ, ಅವರನ್ನು ಕಾನೂನಿನ ಮುಂದೆ ತಂದು ತಕ್ಕ ಶಿಕ್ಷೆ ಕೊಡಿಸಬೇಕಾಗಿದೆ. ಅದಕ್ಕಾಗಿ ಸಂಘಟಿತ ಹೋರಾಟ ಅಗತ್ಯವಿದೆ ಎಂದು ಹೇಳಿದರು.

ಧರಣಿ ಸತ್ಯಾಗ್ರಹವನ್ನು ಉದ್ದೇಶಿಸಿ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್‌ವಾದ) ಜಿಲ್ಲಾ ಸಂಚಾಲಕ ಚಂದು ಎಲ್., ದಸಂಸ(ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಂಚಾಲಕ ರಘು ಜಿ.ಎಕ್ಕಾರ್, ಜಿಲ್ಲಾ ಸಂಘಟನಾ ಸಂಚಾಲಕ ಕೃಷ್ಣಾನಂದ ಡಿ., ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ದಯಾನಂದ ಶೆಟ್ಟಿ, ಡಿವೈಎಫ್‌ಐ ಮಂಗಳೂರು ನಗರಾಧ್ಯಕ್ಷ ಇಮ್ತಿಯಾಝ್, ‘ಜೈಕನ್ನಡಮ್ಮ’ ಸಂಪಾದಕ ದೇವಿಪ್ರಸಾದ್, ಎಸ್‌ಎಫ್‌ಐ ಮುಖಂಡ ನಿತಿನ್ ಕುಮಾರ್, ಸಿಪಿಎಂ ತಾಲೂಕು ಕಾರ್ಯದರ್ಶಿ ಶಿವಕುಮಾರ್, ಬಿ.ಎಂ.ಭಟ್, ಹರಿದಾಸ್ ಮಾತನಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಪ್ರತಿಭಟನೆಯಲ್ಲಿ ಸೌಜನ್ಯಾಳ ತಂದೆ ಚಂದಪ್ಪ ಗೌಡ, ತಾಯಿ ಕುಸುಮಾವತಿ, ವಿಠ್ಠಲ ಗೌಡ ಹಾಗೂ ಮನೆಯವರು ಉಪಸ್ಥಿತರಿದ್ದರು. ವಿವಿಧ ಸಂಘಟನೆಗಳ ಮುಖಂಡರಾದ ಜೀವನ್‌ರಾಜ್ ಕುತ್ಯಾರ್, ನ್ಯಾಯವಾದಿ ವಸಂತ ಮರಕಡ, ವೆಂಕಪ್ಪಕೋಟ್ಯಾನ್ ಇಂದಬೆಟ್ಟು, ಡಾ.ಹರಳೆ, ದಿನೇಶ್ ಗೌಡ ಮಲವಂತಿಗೆ, ಬಿ.ಕೆ. ವಸಂತ್, ದಾಮೋದರ ಭಟ್, ಸಂಜೀವ ಆರ್., ಜನಾರ್ದನ ಬಂಗೇರ, ಸಂತೋಷ್ ಮಜಲು, ಲಕ್ಷ್ಮಣ ಗೌಡ ಪಾಂಗಳ, ಶೈಲೇಶ್ ಆರ್.ಜೆ., ರವಿರಾಜ್, ಶೇಖರ್ ಎಲ್., ನೀಲೇಶ್, ಕಿರಣಪ್ರಭಾ, ಮಧುಸೂದನ್, ಪ್ರಶಾಂತ್, ಸುಕನ್ಯಾ, ಪುಷ್ಪರಾಜ್ ಮೊದಲಾದವರು ಪಾಲ್ಗೊಂಡಿದ್ದರು.

Forensic evidence about Kumari Sowjanya Rape & Murder Case

This is the scanned copy of the VISA of Mr. NISCHAL.


(Infrared and Constrat photo print is attached) which is produced by Dr. Verendra Hegde in front of private cameraman. This video is fully edited (total 3 good take only showed which is recorded in his camber with pre plan script ) To circulate throughout the MEDIA to prove them self innocent in the RAPE and MURDER CASE of KUMARI SOWJANYA .


If you look closely u may shock because it's totally FAKE.

So how they manipulated it?

Here is the answer:

Just zoom to the red circle:- See the seal [dated 30 JAN 2013] which should be under of the seal dated [SEP 07 2013] according to the date wise. But it's actually over lapped on all of them, Instead it should be under of the seal dated [SEP 07 2013].

This small mistake make the BIG difference, so how they did this? Just scanning some others VISA copy and made CUT & PAST E into it. All SEAL with date DATE they did the same way, how they need to show fool the people that particular MURDER DATE OCT 09 2013 as if Mr. NISCHAL was in ABROAD .

Exactly they wanted to prove that Mr. NISCHAL was dispatched on particle date as mentioned they said in VISA photo scanned copy. Seal dated [21 AUG 2012] and arrival date seal dated [28 DEC 2012].


If CBI handle the case in same way by advanced forensic Scientific tests or techniques used in connection with the detection of crime case is simply solved.

Courtesy: Rakey Rox

Wednesday 16 October 2013

Watch complete TV9 'ನ್ಯಾಯ ಎಲ್ಲಿದೇ' discussion here.

Below are the links to watch TV9 'ನ್ಯಾಯ ಎಲ್ಲಿದೇ' discussion.





Part 1: http://youtu.be/cUtsdxu_J80

Part 2: https://www.youtube.com/watch?v=xJu5uS-K8uU

Part 3: https://www.youtube.com/watch?v=zGN-zMwzm8w

Part 4: https://www.youtube.com/watch?v=UX6cFAMwUJs

Part 5: https://www.youtube.com/watch?v=UX6cFAMwUJs

Part 6: https://www.youtube.com/watch?v=UtkgCCTW7eg

Part 7: https://www.youtube.com/watch?v=rbKRLbwTQJc

Part 8: https://www.youtube.com/watch?v=JnG9UA_ZeQI

Part 9: https://www.youtube.com/watch?v=eZiYhvwb0eg

Part 10: https://www.youtube.com/watch?v=Vj-l89bCHpI

Part 11: https://www.youtube.com/watch?v=rWIYrlWspkI

Part 12: https://www.youtube.com/watch?v=2rT633tnnYw

Part 13: https://www.youtube.com/watch?v=M5UZgccovcU

Part 14: https://www.youtube.com/watch?v=86hpBSG1I3k

Part 15: https://www.youtube.com/watch?v=csZ0y98n_KA

Part 16: https://www.youtube.com/watch?v=G2RZA04GW-g

Part 17: https://www.youtube.com/watch?v=t7MLsfrF7X8

Part 18: https://www.youtube.com/watch?v=WIak09eHfmQ

Part 19: https://www.youtube.com/watch?v=A572ml8jm34

Part 20: https://www.youtube.com/watch?v=X5LF6OZO478

Part 21: https://www.youtube.com/watch?v=AMl84dgI2Ek

ಸೌಜನ್ಯ ಹತ್ಯೆ: ಪ್ರತಿ ಕುಟುಂಬದ ಸ್ಥಿತಿಯೂ ಮುಂದೆ ಭಿನ್ನವಾಗಿರಲಾರದು.




- ಶೌರೀಶ್ ಕುದ್ಕುಳಿ
ಪ್ರಜ್ಞಾಪೂರ್ವಕವಾಗಿ ಎಸಗಿದಂತಹ ಒಂದು ಮೃಗೀಯ ಕಾರ್ಯವನ್ನು ಮರೆಮಾಚುವ ಕೆಲಸ ಇಂದು ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಒಂದು ವರ್ಷದ ಹಿಂದೆ ಸೌಜನ್ಯ ಎಂಬ ಅಮಾಯಕ ಹೆಣ್ಣು ಮಗಳ ದಾರುಣ ಹತ್ಯೆಯಾಯಿತು. ಕೆಲವು ಕಾಮುಕರು ಆಕೆಯನ್ನು ಮೃಗೀಯ ರೀತಿಯಲ್ಲಿ ಬಳಸಿಕೊಂಡು, ಕೊಂದು ಹಾಕಿದರು. ಆ ಹೊತ್ತಲ್ಲಿ, ದೇಹದಲ್ಲಿ ಜೀವಾತ್ಮವಿದ್ದ ಪ್ರತಿ ಮಾನವನೂ ಯಾವ ರೀತಿ ಪ್ರಾಣ ಮತ್ತು ಮಾನ ಉಳಿಸಿಕೊಳ್ಳಲು ಒದ್ದಾಡುತ್ತಾನೆಯೋ, ಅದೇ ರೀತಿ ಆಕೆಯೂ ತನ್ನ ಪ್ರಾಣರಕ್ಷಣೆಗೆ ವಿಲವಿಲ ಒದ್ದಾಡಿದ ಕುರುಹುಗಳು ನಿಖರವಾಗಿ ಕಾಣಿಸಿವೆ. ತನ್ನ ಅರಿವಿಗೆ ಸಾವಿನ ಕೊನೆಗಳಿಗೆ ಕಾಣಿಸುತ್ತಿದ್ದು, ಅದನ್ನು ಇನ್ನಾರೋ ಬಲಾತ್ಕಾರವಾಗಿ ಹೇರುತ್ತಿರುವಾಗ, ಅದರಿಂದ ಬಿಡುಗಡೆ ಪಡೆಯುವ ಹೊತ್ತಿನಲ್ಲಿ ನಡೆಸುವ ಫಲಕಾರಿಯಲ್ಲದ ಹೋರಾಟ ಮತ್ತು ಆ ವೇದನೆ ಊಹಿಸಿಕೊಂಡರೆ ಎದೆ ನಡುಗುವಂತಹುದು.
ಧರ್ಮವೇ ನೆಲೆನಿಂತ ಬೀಡಾದ ತುಳುನಾಡು ಮತ್ತು ಕರ್ನಾಟಕದಾದ್ಯಂತ ಮನೆಮಾತಾದ ಶ್ರೀ ಮಂಜುನಾಥನಿರುವ ಧರ್ಮಸ್ಥಳದಲ್ಲಿ ಕಾಮುಕರು ಆಕೆಯನ್ನು ಎಳೆದೊಯ್ದು ಅತ್ಯಾಚಾರ ನಡೆಸಿದರು. ಮನೆಗೆ ತೆರಳುವ ಹಾದಿ ಬದಿಯಲ್ಲಿ, ಸಂಜೆ ಸುಮಾರು 5 ಗಂಟೆ ಹೊತ್ತಿಗೆ ನಡೆದ ಈ ಘಟನೆಯ ಸ್ಥಳ ಆ ಸಂದರ್ಭದ ಭೀಕರತೆಯ ಕರಾಳತೆಗೆ ಸಾಕ್ಷಿ. ಮಾನರಕ್ಷಣೆ ಮತ್ತು ಜೀವರಕ್ಷಣೆಗಾಗಿ ಆಕೆ ಒದ್ದಾಡಿರಬಹುದಾದ ಪರಿ, ಆಕೆಯ ಶವ ಬಿದ್ದಿದ್ದ ಜಾಗದಲ್ಲಿರುವ ಕುರುಹುಗಳು ಎಂತಹವರನ್ನೂ ಬೆಚ್ಚಿ ಬೀಳಿಸುವಂತಹದ್ದು. ಕೈ ಕಾಲುಗಳನ್ನು ಮರಕ್ಕೆ ಕಟ್ಟಿ ಹಾಕಿದ ಭೀಭತ್ಸ ಚಿತ್ರ ಹಾಗೆಯೇ ಇತ್ತು. ಕಾಲೇಜಿನ ಗುರುತುಪತ್ರದ ದಾರವೇ ಕತ್ತು ಹಿಸುಕಿ ಕೊಲೆ ಮಾಡಲು ಬಳಸಿದ ಹಗ್ಗವಾಗಿತ್ತು.
ಈ ಘಟನೆಗೆ ಹಲವು ಸಂಘಟನೆಗಳು ಅದರಲ್ಲೂ ವಿದ್ಯಾರ್ಥಿ ಸಂಘಟನೆಗಳು ಮೌನವಾಗಿ ಕಣ್ಣೀರು ಸುರಿಸಿದವು. ಬೀದಿಗಿಳಿದು ಪ್ರತಿಭಟನೆ ಮಾಡಿದವು. ಆದರೆ ಸಾರ್ವಜನಿಕ ಸ್ಮರಣೆ ಅಥವಾ ನೆನಪು ಕ್ಷಣಕಾಲ ಎನ್ನುವಂತೆ, ಸಾರ್ವಜನಿಕರ ರೋಷದ ಬೆಂಕಿ ಇಂದು ತಣ್ಣಗಾಗುತ್ತಿದೆ. ಕಟುಕರು ಬೀದಿಯಲ್ಲಿ ರಾಜಾರೋಷವಾಗಿ ಓಡಾಡುತ್ತಿದ್ದಾರೆ.
ಇವುಗಳ ಅರಿವಿರುವ ಜನತೆ ನ್ಯಾಯಾಲಯ, ಪೋಲಿಸ್ ವ್ಯವಸ್ಥೆ ಮತ್ತು ಅಂತಿಮವಾಗಿ ಸರಕಾರದ ಮೇಲೆ ಭರವಸೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಮಹಿಳಾ ಸಂಘಟನೆಗಳು ಮೂಕ ವೇದನವನ್ನು ಅನುಭವಿಸುತ್ತಿವೆಯೋ ಎನ್ನುವಂತೆ ಭಾಸವಾಗುತ್ತಿದೆ! ಮಂಗಳೂರಿನ ಪಬ್ ದಾಳಿಗೊಳಗಾದ ಹೆಣ್ಣು ಮಕ್ಕಳಿಗೆ ದೊರಕಿದ್ದ ಬೆಂಬಲ ಮೈಸೂರಿನಲ್ಲಿ ರೈಲಿನಿಂದ ತಳ್ಳಲ್ಪಟ್ಟ ಹೆಣ್ಣು ಮಗಳಿಗೆ ದೊರಕಿಲ್ಲ! ಹಾಗೆಯೇ ಧರ್ಮಸ್ಥಳದ ಸೌಜನ್ಯಳ ಅಮಾನುಷ ಕೊಲೆಯ ಖಂಡಿಸಿ ಹೋರಾಟ ಮಾಡಿದವರ ವಿರುದ್ಧ ಕೇಸ್ ದಾಖಲು ಮಾಡಿಕೊಂಡ ಉಡುಗೋರೆ ಮಾತ್ರವೇ ಬೆಳ್ತಂಗಡಿಯ ನಾಗರಿಕರಿಗೆ ದೊರಕಿತು!
ನಮ್ಮ ವ್ಯವಸ್ಥೆ ಹೇಗಿದೆ ಮತ್ತು ಎತ್ತ ಸಾಗುತ್ತಿದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ. ಪ್ರತಿ ವ್ಯಕ್ತಿ ಯಾ ಸಂಘಟನೆಗೆ ಇಂದು ಸಾರ್ವಜನಿಕವಾಗಿ ಅಜೆಂಡಾ ಬೇಕಾಗಿದೆ. ಕೆಲವೊಮ್ಮೆ ಇವರು ರಾಜಕೀಯ ಪಕ್ಷಗಳ ಮುಖವಾಣಿಯಂತೆ ವರ್ತಿಸುತ್ತವೆ. ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳ ಸಾರ್ವಜನಿಕ ಸಂಸ್ಥೆಗಳು ವಿಷಯಾಧಾರಿತ ಚಳುವಳಿಗಳನ್ನು ಮಾಡುತ್ತವೆ. ಇಡೀ ಮನುಕುಲದ ಬುಡಕ್ಕೇ ಪೆಟ್ಟು ಬಿದ್ದಾಗಲೂ, ಸಾರ್ವಜನಿಕರು ಕ್ಷಣ ಕಾಲ ಮಾತ್ರ ವಿಚಲಿತರಾಗಿ ಖಂಡಿಸುತ್ತಾರೆ. ಆದರೆ ಅದರ ಮುಂದಿನ ಬೆಳವಣಿಗೆಗಳ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳುವುದಿಲ್ಲ.
ಸೌಜನ್ಯ ಪ್ರಕರಣವೂ ಈ ರೀತಿಯಾಗಿ ಜನರಿಂದ ಮರೆಯಾಗುತ್ತಿರುವ ವೇದನೆಯ ಪ್ರಕರಣ. ಮರೆಯಾಗುವ ರೀತಿಯಲ್ಲಿ ಕೊಲೆಯ ವಿಚಾರಣೆಯ ಗತಿಯೂ ಸಾಗಿದೆ! ಆರೋಪ ಪ್ರತಿ ಆರೋಪಗಳು ನಡೆಯುತ್ತಿವೆ. ಸೌಜನ್ಯ ಹೆತ್ತವರಿಗೆ ಪ್ರಚಾರ ಬೇಕಿಲ್ಲ, ನ್ಯಾಯ ಬೇಕಿದೆ. ಮೂಲತ: ಕೃಷಿ ಕುಟುಂಬವಾಗಿರುವ ಇವರು ನ್ಯಾಯಪರತೆಯಿಂದ ಜೀವಿಸುತ್ತಿರುವವರು. ಆಂತರಿಕ ಕಥೆಗಳು ಧರ್ಮದ ನೆಲೆವೀಡಾದ ಧರ್ಮಸ್ಥಳದಲ್ಲಿ ಹರಿದಾಡುತ್ತಿದ್ದರೂ, ಪೋಲಿಸ್ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಮಾಧ್ಯಮಗಳು ಬೆಳಕು ಚೆಲ್ಲುತ್ತಿದ್ದರೂ, ಕಳೆದು ಹೋದ ಸೌಜನ್ಯ ಬರಲಾರಳು ಎಂಬುದು ಅವರ ಅರಿವಿನಲ್ಲಿದೆ. ಸಮಾಜ ಸೂಕ್ತ ರೀತಿಯಲ್ಲಿ ಪ್ರತಿಸ್ಪಂದಿಸಿದ್ದೂ ಅವರ ಗಮನದಲ್ಲಿದೆ. ಆದರೆ ವಿಕೃತವಾಗಿ ಕೊಲೆಗೈದ ಪರಮ ಪಾಪಿಗಳು ಯಾರು ಎಂಬುದು ಎಲ್ಲರಿಗೂ ಗೊತ್ತಿದ್ದರೂ ನ್ಯಾಯ ಮರೀಚಿಕೆಯಾಗಿರುವುದು ಪ್ರತಿದಿನವನ್ನೂ ನರಕ ಮಾಡಿದೆ.
ಮೂರು ನಾಲ್ಕು ವ್ಯಕ್ತಿಗಳ ಕುಕೃತ್ಯ ಇದು ಎಂಬುದು ಅನೇಕರ ಅಭಿಮತ. ಮನೋರೋಗಿ ಈ ಕೃತ್ಯ ಮಾಡಿರಲಾರ ಎಂಬುದು ಸ್ಥಳೀಯರ ಅಭಿಪ್ರಾಯ. ಪೋಲಿಸ್ ಇಲಾಖೆಯ ಕಸ್ಟಡಿಯಲ್ಲಿ ಸದ್ಯಕ್ಕೆ ಇರುವ ವ್ಯಕ್ತಿ ಮನೋರೋಗಿ. ಜಗತ್ತಿನ ವ್ಯವಹಾರದಲ್ಲಿ ಹುಚ್ಚರಾಗಿರುವ ಪ್ರತಿ ಮಾನವನಿಗೆ ಸೌಜನ್ಯ ಪ್ರಕರಣ ಕ್ಷುಲಕವೆಂದೆನಿಸಬಹುದು. ಆದರೆ ಈ ಘಟನೆಯನ್ನು ನಗಣ್ಯ ಮಾಡಿದ್ದಲ್ಲಿ, ಪ್ರತಿ ಕುಟುಂಬದ ಸ್ಥಿತಿಯೂ ಮುಂದೆ ಭಿನ್ನವಾಗಿರಲಾರದು ಎಂಬ ಸಂದೇಶ ಸಮಾಜಕ್ಕಿದೆ.

Wednesday 9 October 2013

ಹಳ್ಳಿಗೊಂದು ಕಾನೂನು ದಿಲ್ಲಿಗೊಂದು ಕಾನೂನು ಯಾಕೆ?



ರಾಜ್ಯಾದ್ಯಂತ ಧಿಗ್ಬ್ರಮೆ ಹುಟ್ಟಿಸಿದ ಸೌಜನ್ಯಾಳ ಸಾವಿಗೆ ಒಂದು ವರ್ಷ. 

ವರ್ಷವಾದರೂ ಪ್ರಕರಣದ ತನಿಖೆ ಸರಿಯಾಗಿ ನಡೆಯದೆ ಇರುವುದರಿಂದ ಜನರಲ್ಲಿ 
ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಪೋಲಿಸರ ಸಂಪೂರ್ಣ ವೈಫಲ್ಯಕ್ಕೆ ಈ ಪ್ರಕರಣ ಕೈಗನ್ನಡಿಯಾಗಿದೆ.

2012 ರ ಅ. 9 ರಂದು ಸಂಜೆ. ಕಾಲೇಜಿನಿಂದ ಮನೆಗೆ ಹೊರಟ ಧರ್ಮಸ್ಥಳದ ಪಾಂಗಾಳ ಮನೆ ಚಂದಪ್ಪ ಗೌಡ ಕುಸುಮಾವತಿ ದಂಪತಿ ಪುತ್ರಿ ಸೌಜನ್ಯಾ (17) ಮನೆಗೆ ಹೋಗಲೇ ಇಲ್ಲ. ಮನೆಗೆ ಬರದ ಪುತ್ರಿಯನ್ನು ಮನೆಯವರು ರಾತ್ರಿಯಿಡೀ ಹುಡುಕಿದರೂ ಸಿಗಲಿಲ್ಲ.

ಮರುದಿನ ಬೆಳಿಗ್ಗೆಯೂ ಹುಡುಕಾಟ ಮುಂದುವರಿಸಿದಾಗ ಮಧ್ಯಾಹ್ನದ ವೇಳೆಗೆ ನೇತ್ರಾವತಿ ಸ್ನಾನ ಘಟ್ಟದಿಂದ ಅನತಿ ದೂರದಲ್ಲಿ ಮುಖ್ಯ ರಸ್ತೆಯಿಂದ ಬಲ ತಿರುವು ಮೂಲಕ ಪಾಂಗಾಳಕ್ಕೆ ಹೋಗುವ ರಸ್ತೆ ಬದಿಯ ಕಾಡಿನಲ್ಲಿ ಶವ ಸಿಕ್ಕಿತು. ಮನೆಯಲ್ಲಿನ ಹೊಸ ಅಕ್ಕಿ ಊಟವನ್ನು ನೆನೆದುಕೊಂಡು ಹೊರಟಿದ್ದ ಬಾಲೆ ದುರುಳರ ಕಾಮಪಿಪಾಸೆಗೆ ಬಲಿಯಾಗಿದ್ದಳು.

ಈ ಘಟನೆಯಿಂದ ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತದ ಸಜ್ಜನ ಮನಸ್ಸುಗಳು ಉರಿದೆದ್ದವು. ಜಾತಿ ಭೇದವಿಲ್ಲದೆ ಅಲ್ಲಲ್ಲಿ ಪ್ರತಿಭಟನೆಗಳು ನಡೆದವು. ಬಾಹಬಲಿ ಬೆಟ್ಟದ ಬಳಿ ಅನುಮಾನಾಸ್ಪದವಾಗಿ ಇದ್ದ ಒಬ್ಬನನ್ನು ಊರವರೇ ಹಿಡಿದು ಪೋಲಿಸರಿಗೆ ಒಪ್ಪಿಸಿದರು. ಬಂಧಿತ ಕಾರ್ಕಳದ ಸಂತೋಷ್ ಎಂಬಾತನೇ ಆರೋಪಿ ಎಂದು ಪೋಲಿಸರು ನಿರ್ಧರಿಸಿ ಕೈತೊಳೆದುಕೊಳ್ಳಲು ಅಂದಿನಿಂದಲೇ ಸನ್ನದ್ಧರಾದರು. ಆನಂತರ ತನಿಖೆ ಹಳ್ಳ ಹಿಡಿಯುತ್ತಾ ಹೋಯಿತು.

ಕಾಲೇಜಿನ ಸಮವಸ್ತ್ರದಲ್ಲಿಯೇ ಈಕೆಯನ್ನು ಕರೆದೊಯ್ದು ಬಲಾತ್ಕಾರ ಮಾಡಿ ಬಟ್ಟೆಬರೆಗಳನ್ನು ಹರಿದು ಹಾಕಲಾಗಿತ್ತು. ಕೈಗಳನ್ನು ಚೂಡಿದಾರದ ಶಾಲಿನಿಂದ ಗಿಡವೊಂದಕ್ಕೆ ಕಟ್ಟಿಹಾಕಲಾಗಿತ್ತು. ಬಳಿಕ ಅತ್ಯಾಚಾರ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಈ ಸಂದರ್ಭ ಬಾಲೆ ಪ್ರತಿ ಹೋರಾಟವನ್ನು ನಡೆಸಿದ್ದಾಳೆ ಎಂದು ಅಲ್ಲಿನ ದೃಶ್ಯ ಸಾರಿಸಾರಿ ಹೇಳುವ ಕುರುಹುಗಳಿದ್ದವು. ಶವ ಇದ್ದ ಸ್ಥಳದಲ್ಲಿ ದೂರವಾಣಿ ಸಂಖ್ಯೆಗಳಿರುವ ಚೀಟಿ ಪೋಲಿಸರಿಗೆ ಸಿಕ್ಕಿದೆ ಅದನ್ನು ನಾಶಮಾಡಿದ್ದಾರೆ ಎಂದು ಜನ ಆರೋಪಿಸುತ್ತಿದ್ದಾರೆ.

ಅಲ್ಲದೆ ಬಳಿಕ ನಡೆದ ತನಿಖೆ ಸಂದರ್ಭ ಪೋಲಿಸರು ಸೌಜ್ಯನ್ಯಾಳ ಮನೆಯಿಂದಲೇ ಆಕೆಯ ಒಳ ಉಡುಪನ್ನು ಸ್ಥಳದಲ್ಲಿ ತಂದಿರಿಸಿದ್ದಾರೆಂದೂ ಆರೋಪಗಳಿವೆ. ಒಟ್ಟಾರೆ ಸೌಜನ್ಯಾಳ ಮೇಲೆ ಆದ ಅತ್ಯಾಚಾರ ಬಳಿಕ ಅದರಿಂದಾದ ಆದ ಸಾವನ್ನು ಗಮನಿಸಿದರೆ ಇದು ಒಬ್ಬನಿಂದ ಆದ ಕೃತ್ಯ ಅಲ್ಲವೇ ಅಲ್ಲ ಎಂದು ಸಾರ್ವಜನಿಕರು ಬಲವಾಗಿ ನಂಬಿದ್ದಾರೆ. ಈ ಕೃತ್ಯದ ಹಿಂದೆ ಇನ್ನೂ ಕೆಲವರಿದ್ದಾರೆ. ಈ ಬಗ್ಗೆ ಸಿಬಿಐ ತನಿಖೆಯೇ ಆಗಬೇಕು ಎಂದು ತಾಲೂಕು ಜಿಲ್ಲೆಯ ನಾಗರಿಕರ ಮನದಲ್ಲಿದೆ. ಹಲವಾರು ಸಂಘಟನೆಗಳು, ಪಕ್ಷಗಳು ಆರಂಭದಲ್ಲಿ ಬಲವಾದ ಪ್ರತಿಭಟನೆಗಳನ್ನು ನಡೆಸಿವೆ. ಅದರಲ್ಲಿ ಎಡಪಂಥೀಯ ಸಂಘಟನೆಗಳು ಈ ಬಗ್ಗೆ ಸತತ ಹೋರಾಟವನ್ನು ಇಂದಿಗೂ ನಡೆಸುತ್ತಾ ಇವೆ.

ಆರಂಭದಿಂದಲೇ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಎಲ್ಲರೂ ಆಗ್ರಹಿಸಿದ್ದರು. ಆದರೆ ಅಂದಿನ ಸರಕಾರ ಕಿವಿಗೊಡಲಿಲ್ಲ. ಬದಲಾಗಿ ಸಿಐಡಿಗೆ ಒಪ್ಪಿಸಿತು. ಅವರೂ ಪೂರ್ಣ ತನಿಖೆ ಮಾಡಲಿಲ್ಲ. ತನಿಖಾಧಿಕಾರಿಗಳು ಬೇರೆ ಬೇರೆ ಬಂದರೂ ಪ್ರಯೋಜನವಾಗಿಲ್ಲ. ಜಿಲ್ಲಾ ನ್ಯಾಯಾಲಯದಲ್ಲಿ ಇನ್ನೂ ಪೂರ್ಣ ಪ್ರಮಾಣದ ತನಿಖಾ ವರದಿ ಸಲ್ಲಿಕೆಯೇ ಆಗಲಿಲ್ಲ.

ಇದೆಲ್ಲವನ್ನು ನೋಡಿದರೆ ಬಂಧಿತ ಆರೋಪಿಯೂ ಬಿಡುಗಡೆಯಾಗುವುದರಲ್ಲಿ ಸಂಶಯವಿಲ್ಲ. ಶಾಸಕ ವಸಂತ ಬಂಗೇರ ಸೌಜನ್ಯಾ ಸಾವಿನ ಬಗ್ಗೆ ವಿಧಾನಸಭೆಯಲ್ಲಿ ಪ್ರಬಲವಾದ ಧ್ವನಿ ಎತ್ತಿ ಪ್ರಕರಣದ ತನಿಖೆಗೆ ಚುರುಕು ಮುಟ್ಟಿಸುವ ಕಾರ್ಯ ಮಾಡಿದ್ದಾರೆ.

ದಿಲ್ಲಿ ಮೊದಲಾದೆಡೆಗಳಲ್ಲಿನ ಇಂಥದ್ದೇ ಪ್ರಕರಣಗಳು ಶೀಘ್ರ ಇತ್ಯರ್ಥವಾಗುತ್ತಿರಬೇಕಾದರೆ ಸೌಜನ್ಯಾಳ ಸಾವು ನ್ಯಾಯವೇ ಎಂಬ ಪ್ರಶ್ನೆ ಇದೆ.

ಹಳ್ಳಿಗೊಂದು ಕಾನೂನು ದಿಲ್ಲಿಗೊಂದು ಕಾನೂನು ಯಾಕೆ? ಈ ಪ್ರಕರಣವನ್ನು ಸಿಬಿಐಗೆ ವಹಿಸಿಕೊಡದೇ ಇರುವುದು ಯಾಕೆ? ಪ್ರಕರಣದ ಪೂರ್ಣ ಮಾಹಿತಿಯನ್ನು ಸರಕಾರ ಯಾಕೆ ಕೊಡುತ್ತಿಲ್ಲ? ಸಾರ್ವಜನಿಕರ ಅನುಮಾನಗಳನ್ನು ಸರಕಾರ ಯಾಕೆ ಪರಿಹರಿಸುತ್ತಿಲ್ಲ? ಪೋಲಿಸರು ದಿಟ್ಟ ತನಿಖೆಗೆ ಯಾಕೆ ಹಿಂದೇಟು ಹಾಕುತ್ತಿದ್ದಾರೆ? ಎಂಬಿತ್ಯಾದಿ ಪ್ರಶ್ನೆಗಳು ತಾಲೂಕಿನ ಜನತೆಯನ್ನು ನ್ಯಾಯ ಸಿಗುವವರೆಗೆ ಕಾಡುತ್ತಲೇ ಇರಲಿದೆ.

ಸೌಜನ್ಯ.... ನಮ್ಮನ್ನು ಕ್ಷಮಿಸು. ನಮ್ಮನ್ನು ಬೆಂಬಲಿಸಿದ ಮಿತ್ರರೇ.. ನಮ್ಮ ಮೇಲೆ ಕ್ಷಮೆ ಇರಲಿ.


ಆತ್ಮೀಯ ಮಿತ್ರರೇ

ಇಂದಿಗೆ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆಯಾಗಿ ಒಂದು ವರ್ಷವಾಯ್ತು. ನಾವೂ ನೀವೂ ನಮ್ಮಿಂದ ಸಾಧ್ಯವಾಗುವಷ್ಟು ಈ ಪೇಜ್'ನ ಮೂಲಕ ನ್ಯಾಯ ಒದಗಿಸಿಕೊಡಲು ಪ್ರಯತ್ನ ಪಟ್ಟಿದ್ದೇವೆ. 

ಈ ಪೇಜಿನ ಕೆಲ ಸಮಚಿತ್ತದ ಮಿತ್ರರನ್ನು ಕೂಡಿಕೊಂಡು ಫೆಬ್ರವರಿ 4ರಂದು ಬೆಳ್ತಂಗಡಿ ತಾಲೂಕು ಕಛೇರಿಯ ಮುಂದೆ ಪ್ರತಿಭಟನೆಯನ್ನೂ ಮಾಡಿದ್ದೆವು. ಕೆಲ ಪತ್ರಕರ್ತರಿಗೆ ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿ ಪತ್ರಿಕೆಗಳಲ್ಲಿ, ಅಂತರ್ಜಾಲ ಪುಟಗಳಲ್ಲಿ ಬರುವಂತೆ ಸಾಧ್ಯವಾದಷ್ಟು ಪ್ರಯತ್ನಿಸಿದ್ದೇವೆ. ಆದರೆ ನ್ಯಾಯ ದೊರಕಿಸಿ ಕೊಡಲು ವಿಫಲರಾದೆವು.

ನಮ್ಮ ಈ ವ್ಯವಸ್ಥೆಯೇ ಇಂತದ್ದು, ಬದಲಾಗುವಂತದ್ದಲ್ಲ. ನಾವು ಬಡವರು... ನ್ಯಾಯ ಕೇಳಬಾರದು ಅನ್ನೋ ಸಾಮಾನ್ಯ ತಿಳುವಳಿಕೆ ನಮಗಿರ್ಲಿಲ್ಲ ನೋಡಿ. ಮಾಡಿದ ಪ್ರಯತ್ನಗಳೆಲ್ಲಾ ಫಲಕೊಡದೆ ಹೋಯ್ತು. ಈ ಬಗ್ಗೆ ನಮಗೆ ಅಪಾರ ನೋವಿದೆ. ನಾವು ಸೋತೆವು. ಸೌಜನ್ಯ ನಮ್ಮನ್ನು ಕ್ಷಮಿಸು. ನಮ್ಮನ್ನು ಬೆಂಬಲಿಸಿದ ಮಿತ್ರರೇ.. ನಮ್ಮ ಮೇಲೆ ಕ್ಷಮೆ ಇರಲಿ.

ಸೌಜನ್ಯಾಳ ದಿವ್ಯಾತ್ಮಕ್ಕೆ ಚಿರಶಾಂತಿ ಸಿಗಲೆಂದು ಆ ಶ್ರೀರಾಮನಲ್ಲಿ ಪ್ರಾರ್ಥಿಸೋಣ

Admin